‘ಊರಿನ ಹದಗೆಟ್ಟ ಸ್ಥಿತಿ ತೋರಿಸಿದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಜವಾಬ್ದಾರಿ ಮೆರೆಯುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೂಡ ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ನಾಳೆ ಊರಿನಲ್ಲಿ ರೋಗ ಉಲ್ಭಣಿಸಿ ಸಾವುಗಳು ಸಂಭವಿಸಿದರೆ ಅದಕ್ಕೆ ಯಾರು ಹೊಣೆ? ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ನಾವು ಹೋರಾಟ ಹಾದಿ ತುಳಿಯುವುದು ಅನಿವಾರ್ಯವಾಗುತ್ತದೆ’ ಎಂದು ಸ್ಥಳೀಯ ಎನ್.ವೇಣುಗೋಪಾಲ ನಾಯ್ಕ್ ಹೇಳಿದರು.
**
ಹದಗೆಟ್ಟ ಊರಿನ ಸ್ಥಿತಿಯ ಬಗ್ಗೆ ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ದೂರು ನೀಡಿದರೂ ಯಾರು ಕೂಡ ಗಮನ ಹರಿಸುತ್ತಿಲ್ಲ.
ಚಂದ್ರಾ ನಾಯ್ಕ್, ಮೂಗಿರೆಡ್ಡಿಪಲ್ಲಿ ನಿವಾಸಿ
**
ಸಿ.ಎಸ್.ವೆಂಕಟೇಶ್