‘ಕುಷ್ಟಗಿಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಚಹಾ ಸೇವನೆಗೆಂದು ಪ್ರತಾಪ್ ಸಿಂಹ, ಹೋಟೆಲ್ಗೆ ಹೋಗುತ್ತಿದ್ದಾಗ, ಅಲ್ಲಿ ನಿಲುಗಡೆ ಮಾಡಿದ್ದ ಲಾರಿಯೊಂದರಲ್ಲಿ ಜಾನುವಾರುಗಳನ್ನು ತುಂಬಿರುವುದನ್ನು ಗಮನಿಸಿದ್ದಾರೆ. ಲಾರಿಯವರನ್ನು ವಿಚಾರಿಸಿದಾಗ ಒರಟಾಗಿ ಮಾತನಾಡಿದ್ದಾರೆ. ಈ ವಿಚಾರವನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನ್ ಗಮನಕ್ಕೆ ತಂದಿದ್ದರು. ನವೀನ್ ನಮಗೆ ತಿಳಿಸಿದರು. ತಕ್ಷಣ ಸ್ಥಳಕ್ಕೆ ಹೋದೆವು’ ಎಂದು ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.