‘ತವರು ಮನೆಯಲ್ಲಿ ಪೂಜೆ ಇತ್ತು. ಹೀಗಾಗಿ, ಎಲ್ಲರೂ ಅಲ್ಲಿಗೆ ಹೋಗಲು ನಿರ್ಧರಿಸಿದ್ದೆವು. ಕೊನೆ ಕ್ಷಣದಲ್ಲಿ ನಿರ್ಧಾರ ಬದಲಿಸಿದ ಪತಿ, ‘ನಾನು ನಿವೇಶನ ನೋಡಲು ಚಿತ್ತೂರಿಗೆ ಹೋಗಬೇಕು. ನೀನು ಮಗನನ್ನು ಕರೆದುಕೊಂಡು ಊರಿಗೆ ಹೋಗಿರು. ನಾನು ಶನಿವಾರ ಮಧ್ಯಾಹ್ನ ಬಂದು ಬಿಡುತ್ತೇನೆ’ ಎಂದು ಹೇಳಿ ನಮ್ಮಿಬ್ಬರನ್ನೇ ಕಳುಹಿಸಿದ್ದರು’ ಎಂದು ಉಮಾ ಹೇಳಿಕೆ ನೀಡಿರುವುದಾಗಿ ಪೊಲೀಸರು ಹೇಳಿದರು.