ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾರ್ವಿನ್ ಸಿದ್ಧಾಂತ ತಪ್ಪು ಎಂಬ ವಾದಕ್ಕೆ ವಿವರಣೆ ಕೊಡಿ ಎಂದ ವಿಜ್ಞಾನಿಗಳ ಪತ್ರಕ್ಕೆ ಉತ್ತರಿಸದೆ ನುಣುಚಿಕೊಂಡ ಸಚಿವ ಸತ್ಯಪಾಲ್ ಸಿಂಗ್!

Last Updated 22 ಜನವರಿ 2018, 6:40 IST
ಅಕ್ಷರ ಗಾತ್ರ

ಔರಂಗಾಬಾದ್: ಚಾರ್ಲ್ಸ್ ಡಾರ್ವಿನ್‌ ಅವರ 'ಮಾನವ ವಿಕಾಸ' ಸಿದ್ಧಾಂತ ವೈಜ್ಞಾನಿಕವಾಗಿ ಸರಿ ಇಲ್ಲ. ಆದ್ದರಿಂದ ಶಾಲೆ ಹಾಗೂ ಕಾಲೇಜುಗಳ ಪಠ್ಯಕ್ರಮದಲ್ಲಿ ಅದನ್ನು ಬದಲಾಯಿಸುವ ಅಗತ್ಯವಿದೆ. ಮಾನವ ಭೂಮಿ ಮೇಲೆ ಕಾಣಿಸಿಕೊಂಡಂದಿನಿಂದ ಮಾನವನಾಗಿಯೇ ಇದ್ದಾನೆ ಎನ್ನುವ ಮೂಲಕ ಡಾರ್ವಿನ್ ಸಿದ್ಧಾಂತ ತಪ್ಪು ಎಂದು ವಾದಿಸಿದ್ದ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರಿಗೆ ವಿಜ್ಞಾನಿಗಳು ಪತ್ರ ಬರೆದಿದ್ದಾರೆ.

ಶುಕ್ರವಾರ ಔರಂಗಾಬಾದ್‌ನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಹಾಯಕ ಸಚಿವ ಸಿಂಗ್‌, ಮಂಗ ಮಾನವನಾಗಿ ಪರಿವರ್ತನೆಗೊಂಡಿದ್ದನ್ನು ನೋಡಿದ್ದೇವೆ ಎಂದು ನಮ್ಮ ಪೂರ್ವಿಕರು ಲಿಖಿತ ಅಥವಾ ಮೌಖಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ನಾವು ಓದಿದ ಪುಸ್ತಕದಲ್ಲಿ ಅಥವಾ ನಮ್ಮ ಹಿರಿಯರು ನಮಗೆ ಹೇಳಿದ ಕಥೆಗಳಲ್ಲಿ ಈ ಬಗ್ಗೆ ಉಲ್ಲೇಖವಿಲ್ಲ ಎಂದು ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT