ಮಹದಾಯಿ ವಿವಾದವನ್ನು ಬಗೆಹರಿಸುವ ಸಾಮರ್ಥ್ಯ ಕೇಂದ್ರ ಸರ್ಕಾರಕ್ಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಒಂದೇ ಕಾರಣಕ್ಕೆ ಈ ವಿಚಾರದಲ್ಲಿ ಮೌನ ವಹಿಸಿದೆ. ಹೀಗಾಗಿ, ಎರಡು ರಾಜ್ಯಗಳ ಮುಖಂಡರ ಜತೆಗೆ ರಾಷ್ಟ್ರಪತಿ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ ಕೆ.ಎನ್.ಲಿಂಗೇಗೌಡ ಒತ್ತಾಯಿಸಿದರು.