ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ಸ್ಕೂಟರ್ ವಿತರಣೆ

Last Updated 24 ಜನವರಿ 2018, 20:15 IST
ಅಕ್ಷರ ಗಾತ್ರ

ಬೆಂಗಳೂರು: ಅಂಗವಿಕಲರಿಗೆ ಉಚಿತವಾಗಿ 10 ಸ್ಕೂಟರ್‌ಗಳನ್ನು ಹಾಗೂ ಬಿಬಿಎಂಪಿ ಸಹಾಯಧನ ಯೋಜನೆಯಡಿ ಫಲಾನುಭವಿಗಳಿಗೆ ಆಟೊ ಹಾಗೂ ಸರಕು ಸಾಗಣೆ ವಾಹನಗಳನ್ನು ರಾಜರಾಜೇಶ್ವರಿನಗರದ ಶಾಸಕ ಮುನಿರತ್ನ ಲಕ್ಷ್ಮೀದೇವಿನಗರದಲ್ಲಿ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಶಾಸಕ, ‘ನಿರುದ್ಯೋಗಿಗಳಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಅವುಗಳನ್ನು ಪಡೆದು ಆರ್ಥಿಕವಾಗಿ ಮುಂದುವರೆಯಬೇಕು’ ಎಂದು ಕಿವಿಮಾತು ಹೇಳಿದರು.

ಬಿಬಿಎಂಪಿ ಸದಸ್ಯ ವೇಲುನಾಯ್ಕರ್, ‘ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 3,500 ಮನೆಗಳ ನವೀಕರಣ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಎಲ್ಲ ಮನೆಗಳಿಗೂ ಕಾವೇರಿ ನೀರು, ಶೌಚಾಲಯ, ಒಳಚರಂಡಿ, ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ. ವಾರ್ಡಿನ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT