ಅಮಿತ್ ಶಾ ಅವರ ಈ ಹೇಳಿಕೆಗೆ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕರ್ನಾಟಕ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಓರ್ವ ಮಾಜಿ ಜೈಲು ಹಕ್ಕಿಯನ್ನು ಆಯ್ಕೆ ಮಾಡಿರುವ ಮಾಜಿ ಜೈಲು ಹಕ್ಕಿಯೊಬ್ಬರು ಈ ರೀತಿ ಹೇಳುತ್ತಿದ್ದಾರೆ. ನನ್ನ ಮತ್ತು ನನ್ನ ಸರ್ಕಾರದ ವಿರುದ್ಧವಿರುವ ಭ್ರಷ್ಟಾಚಾರದ ಲೆಕ್ಕವನ್ನು ಕೊಡಲು ಇವರಿಂದ ಸಾಧ್ಯವೆ?. ಸುಳ್ಳುಗಳನ್ನು ಹೇಳುವುದರಿಂದ ಯಾವುದೇ ಪ್ರಯೋಜನವಾಗಲ್ಲ, ಜನರು ಇದನ್ನೆಲ್ಲಾ ನಂಬುವುದಿಲ್ಲ ಎಂದಿದ್ದಾರೆ.