<p><strong>ಬೆಂಗಳೂರು:</strong> ‘ಎಸ್ಸೆಸ್ಸೆಲ್ಸಿ ಓದುವಾಗ ಶಾಲೆಗೆ ಚಕ್ಕರ್ ಹಾಕಿ ದಿನಕ್ಕೆ 5 ಸಿನಿಮಾಗಳನ್ನು ನೋಡುತ್ತಿದ್ದೆ’ ಎಂದು ಚಲನಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡರು.</p>.<p>ಸದಾಶಿವನಗರ ವೀರಶೈವ ಸಮಾಜವು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಳ್ಳಿಯಲ್ಲಿದ್ದಾಗ ಟೆಂಟ್ಗಳಲ್ಲಿ ಸಿನಿಮಾಗಳನ್ನು ವೀಕ್ಷಿಸುತ್ತಿದ್ದೆ. ಬಳಿಕ ನನ್ನನ್ನು ಬೆಂಗಳೂರಿನಲ್ಲಿ ಶಾಲೆಗೆ ಸೇರಿಸಿದರು. ಆದರೆ, ನನಗೆ ಇಂಗ್ಲಿಷ್ ಬರುತ್ತಿರಲಿಲ್ಲ. ಈ ಕಾರಣಕ್ಕೆ ಶಾಲೆಗೆ ಹೋಗದೆ ದಿನಪೂರ್ತಿ ಸಿನಿಮಾ ನೋಡುತ್ತಿದ್ದೆ. ಅದರ ಪ್ರತಿಫಲವಾಗಿ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದೆ. ನನ್ನ ಜೀವನಕ್ಕೆ ತಿರುವು ಸಿಕ್ಕಿದ್ದೆ ಆಗ’ ಎಂದು ಹೇಳಿದರು.</p>.<p>‘ಕ್ರಮೇಣ ಗಾಂಧಿನಗರದ ನಂಟು ಬೆಳೆದುಕೊಂಡಿತು. ಅಲ್ಲಿ ಕೆಲವೊಂದು ಕಹಿ ಅನುಭವಗಳಾದವು. ಅವುಗಳಿಂದ ಜೀವನದಲ್ಲಿ ಸಾಕಷ್ಟು ಪಾಠ ಕಲಿತೆ. ಚಿತ್ರರಂಗದ ಸಂಬಂಧ ಮತ್ತಷ್ಟು ಗಾಢವಾಗಿ ಬೆಳೆಯಿತು. ಆ ಕಹಿ ಅನುಭವಗಳ ಆಧಾರದ ಮೇಲೆಯೇ ಸಿನಿಮಾಗಳನ್ನು ನಿರ್ಮಿಸಿದೆ’ ಎಂದು ತಿಳಿಸಿದರು.</p>.<p>ಸಿನಿಮಾ ಎಂಬುದು ಕೇವಲ ಮನರಂಜನೆಯಲ್ಲ. ಅದು ಜ್ಞಾನ ವಿಸ್ತಾರದ ವೇದಿಕೆ. ಸಮಾಜದ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಮುಖ್ಯವಾಹಿನಿಗೆ ಕರೆತಂದು ಅವರ ನೋವುಗಳಿಗೆ ಸ್ಪಂದಿಸುವ ಶಕ್ತಿ ಸಿನಿಮಾಗಳಿಗಿದೆ. ‘ನಾನು ಅವನಲ್ಲ..ಅವಳು’ ಸಿನಿಮಾವೇ ಅದಕ್ಕೆ ಉದಾಹರಣೆ ಎಂದು ಹೇಳಿದರು.</p>.<p>ಲಭ್ಯವಿರುವ ಎಲ್ಲ ಹಾದಿಗಳನ್ನು ಬಳಸಿಕೊಂಡು ನಿರ್ದೇಶಕ ಸಿನಿಮಾವನ್ನು ಜನರಿಗೆ ತಲುಪಿಸಬೇಕು. ಆಗ ಆತ್ರವೇ ಆ ಚಿತ್ರವು ಗೆಲ್ಲುವ ಸಾಧ್ಯತೆ ಹೆಚ್ಚು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎಸ್ಸೆಸ್ಸೆಲ್ಸಿ ಓದುವಾಗ ಶಾಲೆಗೆ ಚಕ್ಕರ್ ಹಾಕಿ ದಿನಕ್ಕೆ 5 ಸಿನಿಮಾಗಳನ್ನು ನೋಡುತ್ತಿದ್ದೆ’ ಎಂದು ಚಲನಚಿತ್ರ ನಿರ್ದೇಶಕ ಬಿ.ಎಸ್.ಲಿಂಗದೇವರು ಬಾಲ್ಯದ ದಿನಗಳನ್ನು ನೆನಪು ಮಾಡಿಕೊಂಡರು.</p>.<p>ಸದಾಶಿವನಗರ ವೀರಶೈವ ಸಮಾಜವು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಳ್ಳಿಯಲ್ಲಿದ್ದಾಗ ಟೆಂಟ್ಗಳಲ್ಲಿ ಸಿನಿಮಾಗಳನ್ನು ವೀಕ್ಷಿಸುತ್ತಿದ್ದೆ. ಬಳಿಕ ನನ್ನನ್ನು ಬೆಂಗಳೂರಿನಲ್ಲಿ ಶಾಲೆಗೆ ಸೇರಿಸಿದರು. ಆದರೆ, ನನಗೆ ಇಂಗ್ಲಿಷ್ ಬರುತ್ತಿರಲಿಲ್ಲ. ಈ ಕಾರಣಕ್ಕೆ ಶಾಲೆಗೆ ಹೋಗದೆ ದಿನಪೂರ್ತಿ ಸಿನಿಮಾ ನೋಡುತ್ತಿದ್ದೆ. ಅದರ ಪ್ರತಿಫಲವಾಗಿ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದೆ. ನನ್ನ ಜೀವನಕ್ಕೆ ತಿರುವು ಸಿಕ್ಕಿದ್ದೆ ಆಗ’ ಎಂದು ಹೇಳಿದರು.</p>.<p>‘ಕ್ರಮೇಣ ಗಾಂಧಿನಗರದ ನಂಟು ಬೆಳೆದುಕೊಂಡಿತು. ಅಲ್ಲಿ ಕೆಲವೊಂದು ಕಹಿ ಅನುಭವಗಳಾದವು. ಅವುಗಳಿಂದ ಜೀವನದಲ್ಲಿ ಸಾಕಷ್ಟು ಪಾಠ ಕಲಿತೆ. ಚಿತ್ರರಂಗದ ಸಂಬಂಧ ಮತ್ತಷ್ಟು ಗಾಢವಾಗಿ ಬೆಳೆಯಿತು. ಆ ಕಹಿ ಅನುಭವಗಳ ಆಧಾರದ ಮೇಲೆಯೇ ಸಿನಿಮಾಗಳನ್ನು ನಿರ್ಮಿಸಿದೆ’ ಎಂದು ತಿಳಿಸಿದರು.</p>.<p>ಸಿನಿಮಾ ಎಂಬುದು ಕೇವಲ ಮನರಂಜನೆಯಲ್ಲ. ಅದು ಜ್ಞಾನ ವಿಸ್ತಾರದ ವೇದಿಕೆ. ಸಮಾಜದ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಮುಖ್ಯವಾಹಿನಿಗೆ ಕರೆತಂದು ಅವರ ನೋವುಗಳಿಗೆ ಸ್ಪಂದಿಸುವ ಶಕ್ತಿ ಸಿನಿಮಾಗಳಿಗಿದೆ. ‘ನಾನು ಅವನಲ್ಲ..ಅವಳು’ ಸಿನಿಮಾವೇ ಅದಕ್ಕೆ ಉದಾಹರಣೆ ಎಂದು ಹೇಳಿದರು.</p>.<p>ಲಭ್ಯವಿರುವ ಎಲ್ಲ ಹಾದಿಗಳನ್ನು ಬಳಸಿಕೊಂಡು ನಿರ್ದೇಶಕ ಸಿನಿಮಾವನ್ನು ಜನರಿಗೆ ತಲುಪಿಸಬೇಕು. ಆಗ ಆತ್ರವೇ ಆ ಚಿತ್ರವು ಗೆಲ್ಲುವ ಸಾಧ್ಯತೆ ಹೆಚ್ಚು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>