<p><strong>ಬೆಂಗಳೂರು:</strong> ‘ದೇಶದಲ್ಲಿರುವ 62 ಕೃಷಿಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಕ್ರೀಡೆಗಳಿಗಾಗಿ ವಾರ್ಷಿಕ ₹12 ಕೋಟಿ ಅನುದಾನ ಬಿಡುಗಡೆ ಮಾಡುತ್ತಿದೆ’ ಎಂದು ಪರಿಷತ್ನ ಸಹಾಯಕ ಮಹಾ ನಿರ್ದೇಶಕ ಡಾ.ಪಿ.ಎಸ್.ಪಾಂಡೆ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿರುವ 18ನೇ ಅಖಿಲಭಾರತ ಕೃಷಿ ವಿಶ್ವವಿದ್ಯಾಲಯಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತಮಾಡಿದರು.</p>.<p>ದೇಶದ ವಿವಿಧ ರಾಜ್ಯಗಳಿಂದ ಬಂದಿರುವ ಕ್ರೀಡಾಪಟುಗಳು ಒಂದೆಡೆ ಸೇರಿರುವುದರಿಂದ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ವಿನಿಮಯವೂ ಇಲ್ಲಿ ಸಾಧ್ಯವಾಗುತ್ತದೆ ಎಂದರು.</p>.<p>ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ‘ಗ್ರಾ ಮೀಣ ಕ್ರೀಡೆಯಾಗಿದ್ದ ಕಬಡ್ಡಿ, ಇತ್ತೀಚಿನ ದಿನಗಳಲ್ಲಿ ಪ್ರೊ ಕಬಡ್ಡಿ ಹೆಸರಿನಿಂದ ದೊಡ್ಡ ನಗರಗಳಲ್ಲೂ ಜನಪ್ರಿಯತೆ ಗಳಿಸುತ್ತಿದೆ. ಕ್ರಿಕೆಟ್ ನಂತರ ವಿಶ್ವದ ಅತಿದೊಡ್ಡ ಕ್ರೀಡೆಯಾಗಿ ಹೆಸರು ಮಾಡುತ್ತಿದೆ ಎಂದು ತಿಳಿಸಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಶಿವಣ್ಣ, ‘15 ವರ್ಷಗಳ ನಂತರ ಇಂತಹ ಕ್ರೀಡಾಕೂಟ ನಡೆಯುತ್ತಿದೆ. ಐದು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ದೇಶದ ವಿವಿಧ ರಾಜ್ಯಗಳ ಕೃಷಿಗೆ ಸಂಬಂಧಿಸಿದ ವಿಶ್ವವಿದ್ಯಾಲಯಗಳ ಕ್ರಿಡಾಪಟುಗಳು ಪಾಲ್ಗೊಂಡಿದ್ದಾರೆ’ ಎಂದು ವಿವರಿಸಿದರು.</p>.<p>ಪುರುಷರು ಹಾಗೂ ಮಹಿಳೆಯರ ವಿಭಾಗಗಳಲ್ಲಿ ಕಬಡ್ಡಿ, ಬ್ಯಾಡ್ಮಿಂಟನ್, ವಾಲಿವಾಲ್, ಖೋಖೋ, ಬಾಸ್ಕೆಟ್ಬಾಲ್, ಟೇಬಲ್ಟೆನ್ನಿಸ್ ಪಂದ್ಯಗಳು ನಡೆಯಲಿವೆ. ಅಲ್ಲದೆ ಅಥ್ಲೆಟಿಕ್ಸ್ನಲ್ಲಿ 100, 200, 400, 800 ಮತ್ತು 1500 ಮೀಟರ್ ಪಂದ್ಯಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದಲ್ಲಿರುವ 62 ಕೃಷಿಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಕ್ರೀಡೆಗಳಿಗಾಗಿ ವಾರ್ಷಿಕ ₹12 ಕೋಟಿ ಅನುದಾನ ಬಿಡುಗಡೆ ಮಾಡುತ್ತಿದೆ’ ಎಂದು ಪರಿಷತ್ನ ಸಹಾಯಕ ಮಹಾ ನಿರ್ದೇಶಕ ಡಾ.ಪಿ.ಎಸ್.ಪಾಂಡೆ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿರುವ 18ನೇ ಅಖಿಲಭಾರತ ಕೃಷಿ ವಿಶ್ವವಿದ್ಯಾಲಯಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತಮಾಡಿದರು.</p>.<p>ದೇಶದ ವಿವಿಧ ರಾಜ್ಯಗಳಿಂದ ಬಂದಿರುವ ಕ್ರೀಡಾಪಟುಗಳು ಒಂದೆಡೆ ಸೇರಿರುವುದರಿಂದ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ವಿನಿಮಯವೂ ಇಲ್ಲಿ ಸಾಧ್ಯವಾಗುತ್ತದೆ ಎಂದರು.</p>.<p>ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ‘ಗ್ರಾ ಮೀಣ ಕ್ರೀಡೆಯಾಗಿದ್ದ ಕಬಡ್ಡಿ, ಇತ್ತೀಚಿನ ದಿನಗಳಲ್ಲಿ ಪ್ರೊ ಕಬಡ್ಡಿ ಹೆಸರಿನಿಂದ ದೊಡ್ಡ ನಗರಗಳಲ್ಲೂ ಜನಪ್ರಿಯತೆ ಗಳಿಸುತ್ತಿದೆ. ಕ್ರಿಕೆಟ್ ನಂತರ ವಿಶ್ವದ ಅತಿದೊಡ್ಡ ಕ್ರೀಡೆಯಾಗಿ ಹೆಸರು ಮಾಡುತ್ತಿದೆ ಎಂದು ತಿಳಿಸಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಶಿವಣ್ಣ, ‘15 ವರ್ಷಗಳ ನಂತರ ಇಂತಹ ಕ್ರೀಡಾಕೂಟ ನಡೆಯುತ್ತಿದೆ. ಐದು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ದೇಶದ ವಿವಿಧ ರಾಜ್ಯಗಳ ಕೃಷಿಗೆ ಸಂಬಂಧಿಸಿದ ವಿಶ್ವವಿದ್ಯಾಲಯಗಳ ಕ್ರಿಡಾಪಟುಗಳು ಪಾಲ್ಗೊಂಡಿದ್ದಾರೆ’ ಎಂದು ವಿವರಿಸಿದರು.</p>.<p>ಪುರುಷರು ಹಾಗೂ ಮಹಿಳೆಯರ ವಿಭಾಗಗಳಲ್ಲಿ ಕಬಡ್ಡಿ, ಬ್ಯಾಡ್ಮಿಂಟನ್, ವಾಲಿವಾಲ್, ಖೋಖೋ, ಬಾಸ್ಕೆಟ್ಬಾಲ್, ಟೇಬಲ್ಟೆನ್ನಿಸ್ ಪಂದ್ಯಗಳು ನಡೆಯಲಿವೆ. ಅಲ್ಲದೆ ಅಥ್ಲೆಟಿಕ್ಸ್ನಲ್ಲಿ 100, 200, 400, 800 ಮತ್ತು 1500 ಮೀಟರ್ ಪಂದ್ಯಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>