<p><strong>ಬೆಂಗಳೂರು: </strong>16 ವರ್ಷದ ಬಾಲಕಿಯನ್ನು ಎರಡು ಬಾರಿ ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದ ಗುರು ಅಲಿಯಾಸ್ ಬೂಸಾ (20) ಎಂಬಾತನಿಗೆ ನಗರದ 54ನೇ ಸಿಟಿ ಸಿವಿಲ್ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.</p>.<p>ಜಯನಗರ ಹಾಗೂ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿದ್ದ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ಲತಾ ಕುಮಾರಿ, ಶಿಕ್ಷೆಯ ಆದೇಶ ಹೊರಡಿಸಿದ್ದಾರೆ. ಒಂದು ಪ್ರಕರಣದಲ್ಲಿ 10 ವರ್ಷ ಸಾದಾ ಜೈಲು ಶಿಕ್ಷೆ, ₹1 ಲಕ್ಷ ದಂಡ ಮತ್ತು ಇನ್ನೊಂದು ಪ್ರಕರಣದಲ್ಲಿ 7 ವರ್ಷ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಲಾಗಿದೆ. ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಚಿನ್ನ ವೆಂಕಟರಮಣಪ್ಪ ವಾದಿಸಿದ್ದರು.</p>.<p>ಹೊಸಕೆರೆಹಳ್ಳಿ ನಿವಾಸಿ ಗುರು, 2015ರ ಜುಲೈ 14ರಂದು ಬಾಲಕಿಯನ್ನು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದ. ಆ ಬಗ್ಗೆ ಗಿರಿನಗರ ಠಾಣೆಗೆ ಬಾಲಕಿ ತಂದೆ ದೂರು ಕೊಟ್ಟಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು, ಬಾಲಕಿಯನ್ನು ರಕ್ಷಿಸಿ ಗುರುನನ್ನು ಬಂಧಿಸಿದ್ದರು.</p>.<p>ಜಾಮೀನು ಮೇಲೆ ಹೊರಬಂದಿದ್ದ ಅಪರಾಧಿ, ಬಾಲಕಿಯನ್ನು 2015ರ ಸೆಪ್ಟೆಂಬರ್ 8ರಂದು ಎರಡನೇ ಬಾರಿ ಅಪಹರಿಸಿದ್ದ. ಆ ಬಗ್ಗೆ ಜಯನಗರ ಠಾಣೆಗೆ ತಂದೆ ದೂರು ನೀಡಿದ್ದರು. ಆ ಪ್ರಕರಣದಲ್ಲೂ ಬಾಲಕಿಯನ್ನು ರಕ್ಷಿಸಿ ಗುರುನನ್ನು ಬಂಧಿಸಲಾಗಿತ್ತು.</p>.<p>ಆರೋಪಿಯ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಎರಡೂ ಠಾಣೆಯ ತನಿಖಾಧಿಕಾರಿಗಳು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>16 ವರ್ಷದ ಬಾಲಕಿಯನ್ನು ಎರಡು ಬಾರಿ ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದ ಗುರು ಅಲಿಯಾಸ್ ಬೂಸಾ (20) ಎಂಬಾತನಿಗೆ ನಗರದ 54ನೇ ಸಿಟಿ ಸಿವಿಲ್ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.</p>.<p>ಜಯನಗರ ಹಾಗೂ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿದ್ದ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ಲತಾ ಕುಮಾರಿ, ಶಿಕ್ಷೆಯ ಆದೇಶ ಹೊರಡಿಸಿದ್ದಾರೆ. ಒಂದು ಪ್ರಕರಣದಲ್ಲಿ 10 ವರ್ಷ ಸಾದಾ ಜೈಲು ಶಿಕ್ಷೆ, ₹1 ಲಕ್ಷ ದಂಡ ಮತ್ತು ಇನ್ನೊಂದು ಪ್ರಕರಣದಲ್ಲಿ 7 ವರ್ಷ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಲಾಗಿದೆ. ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಚಿನ್ನ ವೆಂಕಟರಮಣಪ್ಪ ವಾದಿಸಿದ್ದರು.</p>.<p>ಹೊಸಕೆರೆಹಳ್ಳಿ ನಿವಾಸಿ ಗುರು, 2015ರ ಜುಲೈ 14ರಂದು ಬಾಲಕಿಯನ್ನು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದ. ಆ ಬಗ್ಗೆ ಗಿರಿನಗರ ಠಾಣೆಗೆ ಬಾಲಕಿ ತಂದೆ ದೂರು ಕೊಟ್ಟಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು, ಬಾಲಕಿಯನ್ನು ರಕ್ಷಿಸಿ ಗುರುನನ್ನು ಬಂಧಿಸಿದ್ದರು.</p>.<p>ಜಾಮೀನು ಮೇಲೆ ಹೊರಬಂದಿದ್ದ ಅಪರಾಧಿ, ಬಾಲಕಿಯನ್ನು 2015ರ ಸೆಪ್ಟೆಂಬರ್ 8ರಂದು ಎರಡನೇ ಬಾರಿ ಅಪಹರಿಸಿದ್ದ. ಆ ಬಗ್ಗೆ ಜಯನಗರ ಠಾಣೆಗೆ ತಂದೆ ದೂರು ನೀಡಿದ್ದರು. ಆ ಪ್ರಕರಣದಲ್ಲೂ ಬಾಲಕಿಯನ್ನು ರಕ್ಷಿಸಿ ಗುರುನನ್ನು ಬಂಧಿಸಲಾಗಿತ್ತು.</p>.<p>ಆರೋಪಿಯ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಎರಡೂ ಠಾಣೆಯ ತನಿಖಾಧಿಕಾರಿಗಳು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>