<p><strong>ಬೆಂಗಳೂರು:</strong> ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ನಂದೀಶ್ ರೆಡ್ಡಿ ನೇತೃತ್ವದ ತಂಡ ಹೊರಮಾವಿನಲ್ಲಿನ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿತು.</p>.<p>‘ಜನವರಿ 26 ಹಾಗೂ 28 ರಂದು ಸರ್ಕಾರಿ ರಜೆ ಇತ್ತು. ಉಪವಲಯಕ್ಕೆ ಸಲ್ಲಿಕೆಯಾದ 6,000ಕ್ಕೂ ಹೆಚ್ಚು ನಕಲಿ ಅರ್ಜಿಗಳನ್ನು ಮತದಾರ ಪಟ್ಟಿಗೆ ರಾತ್ರೋರಾತ್ರಿ ಸೇರ್ಪಡೆ ಮಾಡಿದ್ದಾರೆ’ ಎಂದು ನಂದೀಶ್ ರೆಡ್ಡಿ ಆರೋಪಿಸಿದರು.</p>.<p>‘ಕಂದಾಯ ನಿರೀಕ್ಷಕರು ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡಿ ಮಹಜರು ಮಾಡದೆ, ಅರ್ಜಿದಾರರನ್ನು ಮತದಾರರ ಪಟ್ಟಿಗೆ ಸೇರಿಸುತ್ತಿದ್ದಾರೆ’ ಎಂದರು</p>.<p>'ಜನ್ಮದಿನ, ವಿಳಾಸ, ಸಂಬಂಧಗಳನ್ನು ದೃಢೀಕರಿಸುವ ದಾಖಲೆಗಳಿಲ್ಲದಿದ್ದರೂ ಅರ್ಜಿಗಳನ್ನೂ ಪುರಸ್ಕರಿಸಿರುವುದು ಸಂಶಯಗಳಿಗೆ ಎಡೆಮಾಡಿದೆ' ಎಂದರು.</p>.<p>‘ಸದ್ಯ ಕೆ.ಆರ್.ಪುರದಲ್ಲಿ ವಾಸಿಸುತ್ತಿರುವುದಾಗಿ ಹೇಳಿಕೊಳ್ಳುವ ಅರ್ಜಿದಾರರಿಂದ, ಹಿಂದಿನ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೊರತೆಗೆದಿರುವ ಪ್ರಮಾಣ ಪತ್ರವನ್ನೂ ಪಡೆಯದೆ ಅರ್ಜಿಗಳನ್ನು ಅನುಮೋದಿಸಿದ್ದಾರೆ. ಚುನಾವಣಾ ಆಯೋಗ ಸೂಚಿಸಿರುವ ಕಟ್ಟು ನಿಟ್ಟಾದ ನಿಯಮಗಳನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ದಾಖಲಾತಿಗಳನ್ನು ಪರಿಶೀಲಿಸಿಯೇ ಮತದಾರರ ಪಟ್ಟಿಗೆ ಹೆಸರು ಸೇರಿಸಲಾಗುತ್ತಿದೆ. ಯಾವುದೇ ರೀತಿಯ ಅಕ್ರಮ ಎಸಗಿಲ್ಲ’ ಎಂದು ಸಹಾಯಕ ಕಂದಾಯ ಅಧಿಕಾರಿ ಚಂಗಲ್ರಾಯಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ನಕಲಿ ಮತದಾರರನ್ನು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ನಂದೀಶ್ ರೆಡ್ಡಿ ನೇತೃತ್ವದ ತಂಡ ಹೊರಮಾವಿನಲ್ಲಿನ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿತು.</p>.<p>‘ಜನವರಿ 26 ಹಾಗೂ 28 ರಂದು ಸರ್ಕಾರಿ ರಜೆ ಇತ್ತು. ಉಪವಲಯಕ್ಕೆ ಸಲ್ಲಿಕೆಯಾದ 6,000ಕ್ಕೂ ಹೆಚ್ಚು ನಕಲಿ ಅರ್ಜಿಗಳನ್ನು ಮತದಾರ ಪಟ್ಟಿಗೆ ರಾತ್ರೋರಾತ್ರಿ ಸೇರ್ಪಡೆ ಮಾಡಿದ್ದಾರೆ’ ಎಂದು ನಂದೀಶ್ ರೆಡ್ಡಿ ಆರೋಪಿಸಿದರು.</p>.<p>‘ಕಂದಾಯ ನಿರೀಕ್ಷಕರು ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡಿ ಮಹಜರು ಮಾಡದೆ, ಅರ್ಜಿದಾರರನ್ನು ಮತದಾರರ ಪಟ್ಟಿಗೆ ಸೇರಿಸುತ್ತಿದ್ದಾರೆ’ ಎಂದರು</p>.<p>'ಜನ್ಮದಿನ, ವಿಳಾಸ, ಸಂಬಂಧಗಳನ್ನು ದೃಢೀಕರಿಸುವ ದಾಖಲೆಗಳಿಲ್ಲದಿದ್ದರೂ ಅರ್ಜಿಗಳನ್ನೂ ಪುರಸ್ಕರಿಸಿರುವುದು ಸಂಶಯಗಳಿಗೆ ಎಡೆಮಾಡಿದೆ' ಎಂದರು.</p>.<p>‘ಸದ್ಯ ಕೆ.ಆರ್.ಪುರದಲ್ಲಿ ವಾಸಿಸುತ್ತಿರುವುದಾಗಿ ಹೇಳಿಕೊಳ್ಳುವ ಅರ್ಜಿದಾರರಿಂದ, ಹಿಂದಿನ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೊರತೆಗೆದಿರುವ ಪ್ರಮಾಣ ಪತ್ರವನ್ನೂ ಪಡೆಯದೆ ಅರ್ಜಿಗಳನ್ನು ಅನುಮೋದಿಸಿದ್ದಾರೆ. ಚುನಾವಣಾ ಆಯೋಗ ಸೂಚಿಸಿರುವ ಕಟ್ಟು ನಿಟ್ಟಾದ ನಿಯಮಗಳನ್ನು ಗಾಳಿಗೆ ತೂರಿ ಮತದಾರರ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ದಾಖಲಾತಿಗಳನ್ನು ಪರಿಶೀಲಿಸಿಯೇ ಮತದಾರರ ಪಟ್ಟಿಗೆ ಹೆಸರು ಸೇರಿಸಲಾಗುತ್ತಿದೆ. ಯಾವುದೇ ರೀತಿಯ ಅಕ್ರಮ ಎಸಗಿಲ್ಲ’ ಎಂದು ಸಹಾಯಕ ಕಂದಾಯ ಅಧಿಕಾರಿ ಚಂಗಲ್ರಾಯಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>