ಬೆಂಗಳೂರು: ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನದಿಂದ ನೀಡುವ 2017ನೇ ಸಾಲಿನ ವಿ.ನಾಗರಾಜ ರಾವ್ ಸಮೂಹ ಮಾಧ್ಯಮ ಪ್ರಶಸ್ತಿಗೆ ಪತ್ರಕರ್ತ ಜಿ.ಎನ್. ರಂಗನಾಥರಾವ್ ಹಾಗೂ ಪ್ರೊ.ಎಲ್.ಎಸ್. ಶೇಷಗಿರಿರಾವ್ ವಿಮರ್ಶಕ ಪ್ರಶಸ್ತಿಗೆ ಡಾ. ಎಚ್. ಎಸ್. ರಾಘವೇಂದ್ರರಾವ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.