<p><strong>ಬೆಂಗಳೂರು</strong>: ಜಯನಗರದ 8ನೇ ಬ್ಲಾಕ್ನಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ಪಾದಚಾರಿ ಮಾರ್ಗವನ್ನು ಅಗೆದು ಮತ್ತೆ ನಿರ್ಮಿಸಲು ಬಿಬಿಎಂಪಿ ಮುಂದಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಕೆಲ ವರ್ಷಗಳ ಹಿಂದೆ ಈ ಮಾರ್ಗವನ್ನು ನಿರ್ಮಿಸಲಾಗಿತ್ತು. ಸುಸ್ಥಿತಿಯಲ್ಲಿ ಇದ್ದರೂ ಅದನ್ನು ಕಿತ್ತು ಹೊಸದಾಗಿ ನಿರ್ಮಿಸಲಾಗುತ್ತಿದೆ ಎಂದು ದೂರಿದ್ದಾರೆ.</p>.<p>ಇತ್ತೀಚೆಗೆ ಸುರಿದ ಮಳೆಯಿಂದಾಗಿ ಪಾದಚಾರಿ ಮಾರ್ಗಕ್ಕೆ ಹಾನಿ ಉಂಟಾಗಿತ್ತು. ಸಾಕಷ್ಟು ತೇಪೆಗಳನ್ನು ಹಾಕಲಾಗಿತ್ತು. ಈ ಮಾರ್ಗದಲ್ಲಿರುವ ಕಾಲುವೆಯ ಹೂಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಜೈನ್ ಪ್ರಕೃತಿ ಅಪಾರ್ಟ್ಮೆಂಟ್ ಸಮುಚ್ಚಯದ ಪ್ರಧಾನ ವ್ಯವಸ್ಥಾಪಕಿ ಸುಷ್ಮಾ ಸುರೇಶ್ ತಿಳಿಸಿದರು.</p>.<p>ಹಲವು ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ಇದರಿಂದ ನಮ್ಮ ವ್ಯಾಪಾರದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಬೀದಿಬದಿ ವ್ಯಾಪಾರಿ ನಂಜೇಗೌಡ ಅವರು ಅಳಲು ತೋಡಿಕೊಂಡರು.</p>.<p>ಈ ಪಾದಚಾರಿ ಮಾರ್ಗವನ್ನು 3 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ಇದು ಹೊಸದಾಗಿ ನಿರ್ಮಿಸಿದ ಮಾರ್ಗವಲ್ಲ.<br /> <strong>–ಯಶೋದಾ ಲಕ್ಷ್ಮಿಕಾಂತ್, ಸ್ಥಳೀಯ ಪಾಲಿಕೆ ಸದಸ್ಯೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಯನಗರದ 8ನೇ ಬ್ಲಾಕ್ನಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ಪಾದಚಾರಿ ಮಾರ್ಗವನ್ನು ಅಗೆದು ಮತ್ತೆ ನಿರ್ಮಿಸಲು ಬಿಬಿಎಂಪಿ ಮುಂದಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಕೆಲ ವರ್ಷಗಳ ಹಿಂದೆ ಈ ಮಾರ್ಗವನ್ನು ನಿರ್ಮಿಸಲಾಗಿತ್ತು. ಸುಸ್ಥಿತಿಯಲ್ಲಿ ಇದ್ದರೂ ಅದನ್ನು ಕಿತ್ತು ಹೊಸದಾಗಿ ನಿರ್ಮಿಸಲಾಗುತ್ತಿದೆ ಎಂದು ದೂರಿದ್ದಾರೆ.</p>.<p>ಇತ್ತೀಚೆಗೆ ಸುರಿದ ಮಳೆಯಿಂದಾಗಿ ಪಾದಚಾರಿ ಮಾರ್ಗಕ್ಕೆ ಹಾನಿ ಉಂಟಾಗಿತ್ತು. ಸಾಕಷ್ಟು ತೇಪೆಗಳನ್ನು ಹಾಕಲಾಗಿತ್ತು. ಈ ಮಾರ್ಗದಲ್ಲಿರುವ ಕಾಲುವೆಯ ಹೂಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಜೈನ್ ಪ್ರಕೃತಿ ಅಪಾರ್ಟ್ಮೆಂಟ್ ಸಮುಚ್ಚಯದ ಪ್ರಧಾನ ವ್ಯವಸ್ಥಾಪಕಿ ಸುಷ್ಮಾ ಸುರೇಶ್ ತಿಳಿಸಿದರು.</p>.<p>ಹಲವು ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ಇದರಿಂದ ನಮ್ಮ ವ್ಯಾಪಾರದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಬೀದಿಬದಿ ವ್ಯಾಪಾರಿ ನಂಜೇಗೌಡ ಅವರು ಅಳಲು ತೋಡಿಕೊಂಡರು.</p>.<p>ಈ ಪಾದಚಾರಿ ಮಾರ್ಗವನ್ನು 3 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ಇದು ಹೊಸದಾಗಿ ನಿರ್ಮಿಸಿದ ಮಾರ್ಗವಲ್ಲ.<br /> <strong>–ಯಶೋದಾ ಲಕ್ಷ್ಮಿಕಾಂತ್, ಸ್ಥಳೀಯ ಪಾಲಿಕೆ ಸದಸ್ಯೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>