ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವಿತಾ ಸಮಾಜದ ಅಧ್ಯಕ್ಷ ಯು. ಕೃಷ್ಣಮೂರ್ತಿ, ‘ಸವಿತಾ ಸಮುದಾಯ ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ಕೋಟಿ ಲೆಕ್ಕದಲ್ಲಿ ಘೋಷಣೆಯಾಗುವ ಅನುದಾನ ಫಲಾನುಭವಿಗಳ ಕೈಸೇರುತ್ತಿಲ್ಲ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ಮುಂದೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಸಿದರು.