ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಹೊರ ದೇಶ ಹಾಗೂ ಹೊರ ರಾಜ್ಯದ ಯುವತಿಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಸೂರ್ಯ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ವಿವೇಕನಗರ, ಕೋರಮಂಗಲ ಹಾಗೂ ಸುತ್ತಮುತ್ತ ಮನೆಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಆರೋಪಿಗಳು, ಅಲ್ಲಿಯೇ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸುತ್ತಿದ್ದರು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಸೂರ್ಯನನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.
‘ದಾಳಿ ವೇಳೆ ಆರೋಪಿಗಳಾದ ಅಬ್ದುಲ್ ಮುಕೀದ್, ಗುರುರಾಜ್ ಹಾಗೂ ಪ್ರಜ್ವಲ್ ತಪ್ಪಿಸಿಕೊಂಡರು. ಅವರಿಗಾಗಿ ಹುಡುಕಾಟ ನಡೆದಿದೆ. ಥಾಯ್ಲೆಂಡ್ನ ಯುವತಿ ಸೇರಿ ಆರು ಯುವತಿಯನ್ನು ರಕ್ಷಿಸಿ ಅವರ ಕುಟುಂಬದವರಿಗೆ ಮಾಹಿತಿ ನೀಡಿ ಪುನರ್ವಸತಿ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.