ಪಾಲಿಕೆಯ ಜಂಟಿ ಆಯುಕ್ತ ಡಾ.ಅಶೋಕ್ ಪ್ರತಿಕ್ರಿಯಿಸಿ, ‘ಹೈಕೋರ್ಟ್ ಆದೇಶದಂತೆ ಸಾರ್ವಜನಿಕ ಪ್ರದೇಶದಲ್ಲಿರುವ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ತೆಗೆಸುತ್ತಿದ್ದೇವೆ. ಫ್ಲೆಕ್ಸ್ ಹಾಕಲು ಜನೌಷಧಿ ಮಳಿಗೆಯವರು ಅನುಮತಿ ಪಡೆದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಬ್ಯಾನರ್ ತೆಗೆದಿಲ್ಲ. ಸದಾನಂದ ಗೌಡ ಹಾಗೂ ಬಿಜೆಪಿ ಮುಖಂಡ ಮುನಿರಾಜು ಚಿತ್ರಗಳಿರುವ ಫ್ಲೆಕ್ಸ್ಗಳನ್ನು ತೆಗೆಸಿದ್ದೇವೆ’ ಎಂದು ಸ್ಪಷ್ಟಪಡಿಸಿದರು.