ಕೆ.ಆರ್. ಖಲೀಲ್ ಆಹ್ಮದ್ ಸೇರಿದಂತೆ ಒಟ್ಟು 11 ಜನರು ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಕೆಪಿಎಸ್ಸಿ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಎಚ್.ಎನ್. ಕೃಷ್ಣ ಸೇರಿದಂತೆ 10 ಜನ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ಜುಲೈ 15ಕ್ಕೆ ವಿಚಾರಣೆ ಮುಂದೂಡಲಾಗಿದೆ.