ಬೆಂಗಳೂರು: ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ದಸ್ತಗೀರ್ ಫೈರೋಝ್ ಮತ್ತು ಮೊಹ್ಮದ್ ಆಫ್ರೀದ್ ಬಂಧಿತರು. ಗೋವಿಂದಶೆಟ್ಟಿ ಪಾಳ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನೂ ಗಮನಿಸಿದ ಪೊಲೀಸರು, ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ವಿಷಯ ಗೊತ್ತಾಗಿದೆ.
‘ಅತ್ತಿಬೆಲೆ ವೃತ್ತದಲ್ಲಿರುವ ಬಸ್ ನಿಲ್ದಾಣದ ಬಳಿಯಿಂದ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡಿದ್ದ ಈ ಇಬ್ಬರೂ ಬಳಿಕ ತಲೆಮರೆಸಿಕೊಂಡಿದ್ದರು.
ಕದ್ದ ಮೊಬೈಲ್ನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ’ ಎಂದು ಪೊಲೀಸರು ತಿಳಿಸಿದರು.