ಇನ್ನೊಂದು ಪ್ರಕರಣದಲ್ಲಿ, ಪೀಣ್ಯ ಸಂಚಾರ ಠಾಣೆ ವ್ಯಾಪ್ತಿಯ ಮೇಲ್ಸೇತುವೆ ಯಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮಂಜುನಾಥ್ (27) ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಕುಶಾಲ್ (21) ತೀವ್ರವಾಗಿ ಗಾಯಗೊಂಡಿದ್ದಾರೆ. ಇವರು ಬೆಂಗಳೂರಿನಿಂದ ತುಮಕೂರು ಕಡೆಗೆ ಹೊರಟಿದ್ದಾಗ ಅವಘಡ ಸಂಭವಿಸಿದೆ. ‘ಸ್ಥಳಕ್ಕೆ ಹೋದಾಗ ರಸ್ತೆಯಲ್ಲೇ ಬೈಕ್ ಹಾಗೂ ಮೃತದೇಹ ಬಿದ್ದಿತ್ತು. ಅಪಘಾತ ಹೇಗಾಯಿತು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ಪೊಲೀಸರು ಹೇಳಿದರು.