‘ಉದ್ಯಮ ಆರಂಭಕ್ಕೆ ಮುನ್ನ ಹಾಗೂ ಆರಂಭದ ನಂತರ ಮಂಡಳಿಯಿಂದ ಅನುಮತಿ ಪಡೆಯುವುದು ಕಡ್ಡಾಯ. ಅನುಮತಿ ಪಡೆಯದಿರುವುದು ಹಾಗೂ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಹಾಗೂ ಹೈಕೋರ್ಟ್ ಆದೇಶದಂತೆ ದಂಡ ನಿಗದಿ ಮಾಡಿ ನೋಟಿಸ್ ನೀಡಲಾಗಿದೆ’ ಎಂದು ಮಂಡಳಿಯ ಸದಸ್ಯ ಕಾರ್ಯದರ್ಶಿ ಬಸವರಾಜ್ ವಿ.ಪಾಟೀಲ್ ‘ಪ್ರಜಾವಾಣಿ’ಗೆ ತಿಳಿಸಿದರು.