<p><strong>ಬೆಂಗಳೂರು: </strong>ನಗರ ಜಿಲ್ಲೆಯ ಮೂರು ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಶೇ 70.55ರಷ್ಟು ಮತದಾನ ನಡೆದಿದೆ.</p>.<p>ನಗರ ಜಿಲ್ಲೆಯ ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಶೇ 68.13, ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಶೇ 73.27 ಹಾಗೂ ಆನೇಕಲ್ ತಾಲ್ಲೂಕಿನಲ್ಲಿ ಶೇ 70.25ರಷ್ಟು ಮತದಾನವಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.</p>.<p>ಮೂರು ತಾಲ್ಲೂಕಿನ 1,376 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 3,368 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಸಂಜೆ ವೇಳೆಗೇ ಮತದಾನ ಮುಗಿದರೆ ಆನೆಕಲ್ ತಾಲ್ಲೂಕಿನಲ್ಲಿ ರಾತ್ರಿ 8ರ ತನಕ ಮತದಾನ ನಡೆಯಿತು.</p>.<p>ಇಟ್ಟಿಗೆ ಕಾರ್ಖಾನೆ, ಕೃಷಿ ಚಟುವಟಿಕೆ, ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕೆಲ ಮತಗಟ್ಟೆಗಳಿಗೆ ಸಂಜೆ ವೇಳೆಗೆ ಬಂದರು. ಸಂಜೆ 5 ಗಂಟೆಯಷ್ಟರಲ್ಲಿ ಮತಗಟ್ಟೆ ಆವರಣಕ್ಕೆ ಬಂದವರಿಗೆ ಟೋಕನ್ ವಿತರಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯಾವುದೇ ಅಹಿಕರ ಘಟನೆಗಳಿಲ್ಲದೆ ಶಾಂತಿಯುತ ಮತದಾನ ನಡೆದಿದೆ. ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು.</p>.<p>ಮತದಾನ ತಡವಾದ ಮತಗಟ್ಟೆಗಳಿಂದ ಮತಪೆಟ್ಟಿಗೆಗಳು ಸುರಕ್ಷಿತವಾಗಿ ಡಿ–ಮಸ್ಟರಿಂಗ್ ಕೇಂದ್ರ ತಲುಪಲು ಪೊಲೀಸ್ ಕಾವಲು ಇದ್ದರೂ, ಆಯಾ ವ್ಯಾಪ್ತಿಯ ಠಾಣೆ ಸಿಬ್ಬಂದಿ ಮತಪೆಟ್ಟಿಗೆ ಕೊಂಡೊಯ್ಯುವ ವಾಹನಗಳಿಗೆ ಭದ್ರತೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರ ಜಿಲ್ಲೆಯ ಮೂರು ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಶೇ 70.55ರಷ್ಟು ಮತದಾನ ನಡೆದಿದೆ.</p>.<p>ನಗರ ಜಿಲ್ಲೆಯ ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಶೇ 68.13, ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಶೇ 73.27 ಹಾಗೂ ಆನೇಕಲ್ ತಾಲ್ಲೂಕಿನಲ್ಲಿ ಶೇ 70.25ರಷ್ಟು ಮತದಾನವಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.</p>.<p>ಮೂರು ತಾಲ್ಲೂಕಿನ 1,376 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 3,368 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಸಂಜೆ ವೇಳೆಗೇ ಮತದಾನ ಮುಗಿದರೆ ಆನೆಕಲ್ ತಾಲ್ಲೂಕಿನಲ್ಲಿ ರಾತ್ರಿ 8ರ ತನಕ ಮತದಾನ ನಡೆಯಿತು.</p>.<p>ಇಟ್ಟಿಗೆ ಕಾರ್ಖಾನೆ, ಕೃಷಿ ಚಟುವಟಿಕೆ, ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕೆಲ ಮತಗಟ್ಟೆಗಳಿಗೆ ಸಂಜೆ ವೇಳೆಗೆ ಬಂದರು. ಸಂಜೆ 5 ಗಂಟೆಯಷ್ಟರಲ್ಲಿ ಮತಗಟ್ಟೆ ಆವರಣಕ್ಕೆ ಬಂದವರಿಗೆ ಟೋಕನ್ ವಿತರಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಯಿತು ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯಾವುದೇ ಅಹಿಕರ ಘಟನೆಗಳಿಲ್ಲದೆ ಶಾಂತಿಯುತ ಮತದಾನ ನಡೆದಿದೆ. ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು.</p>.<p>ಮತದಾನ ತಡವಾದ ಮತಗಟ್ಟೆಗಳಿಂದ ಮತಪೆಟ್ಟಿಗೆಗಳು ಸುರಕ್ಷಿತವಾಗಿ ಡಿ–ಮಸ್ಟರಿಂಗ್ ಕೇಂದ್ರ ತಲುಪಲು ಪೊಲೀಸ್ ಕಾವಲು ಇದ್ದರೂ, ಆಯಾ ವ್ಯಾಪ್ತಿಯ ಠಾಣೆ ಸಿಬ್ಬಂದಿ ಮತಪೆಟ್ಟಿಗೆ ಕೊಂಡೊಯ್ಯುವ ವಾಹನಗಳಿಗೆ ಭದ್ರತೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>