ಪೂರ್ವವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತ ಮಾತನಾಡಿ, ‘ಇದು ಇಲಾಖೆಯ ಅತ್ಯುತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಹೀಗಾಗಿ, ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಈಶಾನ್ಯ ವಿಭಾಗದಲ್ಲಿ ಯಶಸ್ವಿಯಾದರೆ ರಾಜ್ಯದಾದ್ಯಂತ ಪೊಲೀಸ್ ಮಾರ್ಷಲ್ ವ್ಯವಸ್ಥೆ ಅನುಷ್ಠಾನಕ್ಕೆ ತರುವ ಸಾಧ್ಯತೆಯಿದೆ’ ಎಂದು ಹೇಳಿದರು.