‘ಫೆ. 3ರಿಂದ 11ರವರೆಗೆ ರಿಯಾಯಿತಿಯಡಿ ದಂಡ ಪಾವತಿಸಿಕೊಳ್ಳಲಾಗಿತ್ತು. ಇದೀಗ, ರಿಯಾಯಿತಿಗೆ ಪುನಃ ಅವಕಾಶ ನೀಡಲಾಗಿದೆ. ಶನಿವಾರ 25,334 ಪ್ರಕರಣಗಳು ಇತ್ಯರ್ಥಗೊಂಡಿವೆ’ ಎಂದು ಸಂಚಾರ ಪೊಲೀಸರು ತಿಳಿಸಿದರು. ‘ಸಂಚಾರ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕರು, ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್ ಅಥವಾ ಪೇಟಿಎಂ ಆ್ಯಪ್ ಮೂಲಕ ಪಾವತಿಸಬಹುದು. ಕರ್ನಾಟಕ ಒನ್, ಬೆಂಗಳೂರು ಒನ್, ಸಮೀಪದ ಸಂಚಾರ ಠಾಣೆ ಹಾಗೂ ಸಂಚಾರ ನಿರ್ವಹಣಾ ಕೇಂದ್ರದಲ್ಲೂ (ಟಿಎಂಸಿ) ದಂಡ ಪಾವತಿಸಲು ಅವಕಾಶವಿದೆ’ ಎಂದು ಅವರು ಹೇಳಿದರು.