ಯಲಹಂಕ: ‘ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ರಚಿಸಿ, ಭಾರತೀಯರಿಗೆ ಅರ್ಪಣೆ ಮಾಡಿದ ಈ ದಿನ, ನಮ್ಮೆಲ್ಲರಿಗೂ ಸಂಭ್ರಮದ ದಿನವಾಗಿದೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.
ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಉಪ ನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
‘ದೇಶದ ಬಗ್ಗೆ ಪ್ರೇಮ, ಗೌರವ ಹಾಗೂ ಸಮರ್ಪಣಾ ಮನೋಭಾವ ಬೆಳೆಸಿಕೊಂಡು ದೇಶದ ಏಳಿಗೆಗೆ ಸಹಕರಿಸಬೇಕು’ ಎಂದರು.