<p><strong>ಬೆಂಗಳೂರು:</strong> ‘ದೇಶದ ಡಿಜಿಟಲ್ ಆರ್ಥಿಕತೆಯು 2025ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ (₹78.29 ಲಕ್ಷ ಕೋಟಿ) ತಲುಪುವ ನಿರೀಕ್ಷೆ ಇದೆ’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಉತ್ತೇಜನ ಕೇಂದ್ರ (’ಇನ್-ಸ್ಪೇಸ್’), ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್ಎಸ್ಐಎಲ್) ಹಾಗೂ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಸಹಯೋಗದಲ್ಲಿ ಭಾರತೀಯ ಖಗೋಳ ಸೊಸೈಟಿ(ಎಎಸ್ಐ) ಆಯೋಜಿಸಿದ್ದ ’ಭಾರತದಲ್ಲಿ ಬಾಹ್ಯಾಕಾಶ ನವೋದ್ಯಮಗಳ ಅಭಿವೃದ್ಧಿ’ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>’ದೇಶದ ಆರ್ಥಿಕತೆಯ ಕೇಂದ್ರ ಬಿಂದುವಾಗುತ್ತಿರುವ ನವೋದ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಬಾಹ್ಯಾಕಾಶ ಸೇರಿ ಎಲ್ಲ ವಲಯಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ನವೋದ್ಯಮಗಳು ಈಗ ಆರ್ಥಿಕತೆಗೆ ಹೊಸ ಚೈತನ್ಯ ತುಂಬುತ್ತಿವೆ’ ಎಂದರು.</p>.<p>‘ಸರ್ಕಾರ ಡಿಜಿಲಿಟೀಕರಣಕ್ಕೆ ಆದ್ಯತೆ ನೀಡಿದೆ. ಹಣಕಾಸು ವಲಯವನ್ನು ಸಂಪೂರ್ಣವಾಗಿ ಡಿಜಿಲೀಕರಣಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಇದರಿಂದಾಗಿಯೇ ಎನ್ಪಿಸಿಐ, ಯುಪಿಐಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದರು.</p>.<p>‘ದಶಕಗಳ ಕಾಲ ದೇಶದ ಆರ್ಥಿಕತೆಯು ಕೆಲವೇ ಕಂಪನಿಗಳ ಮೇಲೆ ಅವಲಂಬಿತವಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಅವಕಾಶಗಳನ್ನು ಸೃಷ್ಟಿಸಲಾಗಿದೆ. ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್ ಮುಂತಾದ ಹೊಸ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ’ ಎಂದರು.</p>.<p>ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಉತ್ತೇಜನ ಕೇಂದ್ರದ (’ಇನ್-ಸ್ಪೇಸ್’) ಅಧ್ಯಕ್ಷ ಡಾ. ಪವನ್ ಕುಮಾರ್ ಗೋಯೆಂಕಾ, ‘ಬಾಹ್ಯಾಕಾಶ ತಂತ್ರಜ್ಞಾನ ಜನಸಾಮಾನ್ಯರಿಗೆ ತಲುಪಬೇಕು. ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಿದೆ. ರಾಜಕೀಯ ಇಚ್ಛಾಶಕ್ತಿಯ ಬಗ್ಗೆ ಅನುಮಾನ ಬೇಡ. ಈ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಸಾಗಬೇಕಾಗಿದೆ’ ಎಂದು ಸಲಹೆ ನೀಡಿದರು.</p>.<p>ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಎಸ್. ಸೋಮನಾಥ್ , ‘ಬಾಹ್ಯಾಕಾಶ ಕ್ಷೇತ್ರದಲ್ಲಿ ಸರ್ಕಾರೇತರ ಸಂಸ್ಥೆಗಳಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲು ಆದ್ಯತೆ ನೀಡಲಾಗುವುದು. ಬಾಹ್ಯಾಕಾಶ ಕ್ಷೇತ್ರದಲ್ಲಿ ಸದ್ಯ 100ಕ್ಕೂ ಹೆಚ್ಚು ನವೋದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಈ ಉದ್ಯಮಗಳಿಗೆ ಬೆಂಬಲ ಅಗತ್ಯ’ ಎಂದು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದ ಡಿಜಿಟಲ್ ಆರ್ಥಿಕತೆಯು 2025ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ (₹78.29 ಲಕ್ಷ ಕೋಟಿ) ತಲುಪುವ ನಿರೀಕ್ಷೆ ಇದೆ’ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಉತ್ತೇಜನ ಕೇಂದ್ರ (’ಇನ್-ಸ್ಪೇಸ್’), ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್ಎಸ್ಐಎಲ್) ಹಾಗೂ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಸಹಯೋಗದಲ್ಲಿ ಭಾರತೀಯ ಖಗೋಳ ಸೊಸೈಟಿ(ಎಎಸ್ಐ) ಆಯೋಜಿಸಿದ್ದ ’ಭಾರತದಲ್ಲಿ ಬಾಹ್ಯಾಕಾಶ ನವೋದ್ಯಮಗಳ ಅಭಿವೃದ್ಧಿ’ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>’ದೇಶದ ಆರ್ಥಿಕತೆಯ ಕೇಂದ್ರ ಬಿಂದುವಾಗುತ್ತಿರುವ ನವೋದ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಬಾಹ್ಯಾಕಾಶ ಸೇರಿ ಎಲ್ಲ ವಲಯಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ನವೋದ್ಯಮಗಳು ಈಗ ಆರ್ಥಿಕತೆಗೆ ಹೊಸ ಚೈತನ್ಯ ತುಂಬುತ್ತಿವೆ’ ಎಂದರು.</p>.<p>‘ಸರ್ಕಾರ ಡಿಜಿಲಿಟೀಕರಣಕ್ಕೆ ಆದ್ಯತೆ ನೀಡಿದೆ. ಹಣಕಾಸು ವಲಯವನ್ನು ಸಂಪೂರ್ಣವಾಗಿ ಡಿಜಿಲೀಕರಣಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಇದರಿಂದಾಗಿಯೇ ಎನ್ಪಿಸಿಐ, ಯುಪಿಐಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದರು.</p>.<p>‘ದಶಕಗಳ ಕಾಲ ದೇಶದ ಆರ್ಥಿಕತೆಯು ಕೆಲವೇ ಕಂಪನಿಗಳ ಮೇಲೆ ಅವಲಂಬಿತವಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಅವಕಾಶಗಳನ್ನು ಸೃಷ್ಟಿಸಲಾಗಿದೆ. ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್ ಮುಂತಾದ ಹೊಸ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ’ ಎಂದರು.</p>.<p>ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಉತ್ತೇಜನ ಕೇಂದ್ರದ (’ಇನ್-ಸ್ಪೇಸ್’) ಅಧ್ಯಕ್ಷ ಡಾ. ಪವನ್ ಕುಮಾರ್ ಗೋಯೆಂಕಾ, ‘ಬಾಹ್ಯಾಕಾಶ ತಂತ್ರಜ್ಞಾನ ಜನಸಾಮಾನ್ಯರಿಗೆ ತಲುಪಬೇಕು. ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಿದೆ. ರಾಜಕೀಯ ಇಚ್ಛಾಶಕ್ತಿಯ ಬಗ್ಗೆ ಅನುಮಾನ ಬೇಡ. ಈ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಸಾಗಬೇಕಾಗಿದೆ’ ಎಂದು ಸಲಹೆ ನೀಡಿದರು.</p>.<p>ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಎಸ್. ಸೋಮನಾಥ್ , ‘ಬಾಹ್ಯಾಕಾಶ ಕ್ಷೇತ್ರದಲ್ಲಿ ಸರ್ಕಾರೇತರ ಸಂಸ್ಥೆಗಳಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲು ಆದ್ಯತೆ ನೀಡಲಾಗುವುದು. ಬಾಹ್ಯಾಕಾಶ ಕ್ಷೇತ್ರದಲ್ಲಿ ಸದ್ಯ 100ಕ್ಕೂ ಹೆಚ್ಚು ನವೋದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಈ ಉದ್ಯಮಗಳಿಗೆ ಬೆಂಬಲ ಅಗತ್ಯ’ ಎಂದು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>