ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಹಾರ ವಿತರಣೆ

Last Updated 8 ಜುಲೈ 2022, 19:11 IST
ಅಕ್ಷರ ಗಾತ್ರ

ಬೆಂಗಳೂರು: ಮರದ ಕೊಂಬೆ ಬಿದ್ದು ಮೃತಪಟ್ಟಿದ್ದ ರಾಕೇಶ್‌ ಅವರ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ₹5 ಲಕ್ಷ ಪರಿಹಾರದ ಚೆಕ್‌ ವಿತರಿಸಲಾಯಿತು.

ಜೂನ್‌ 3ರಂದು ಸಂಜೆ ಮಳೆಯ ಸಂದರ್ಭದಲ್ಲಿ ರಾಕೇಶ್‌ (13) ಮರದ ಕೆಳಗೆ ನಿಂತಿದ್ದರು. ಆಗ ಅವರ ತಲೆಯ ಮೇಲೆ ಕೊಂಬೆ ಬಿದ್ದು, ಗಾಯಗೊಂಡಿದ್ದರು. ಜನಪ್ರಿಯ ನರ್ಸಿಂಗ್‌ ಹೋಂಗೆ ಸೇರಿಸಲಾಗಿತ್ತು. ಜೂನ್‌ 8 ರಂದು ಮೃತಪಟ್ಟಿದ್ದರು.

‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರನ್ನು ಭೇಟಿ ಮಾಡಿದ್ದ ಪೋಷಕರು, ಪರಿಹಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ಅವರು ಕೂಡಲೇ ಪರಿಹಾರ ನೀಡಬೇಕೆಂದು ಸೂಚಿಸಿದ್ದರು. ಅದರಂತೆ, ಪೂರ್ವ ವಲಯದ ಆಯುಕ್ತ ಪಿ.ಎನ್‌. ರವೀಂದ್ರ ಅವರು ಪೋಷಕರಾದ ಸರವಣ ಮತ್ತು ಯಮುನಾ ಅವರಿಗೆ ಪರಿಹಾರದ ಚೆಕ್‌ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT