‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ್ದ ಪೋಷಕರು, ಪರಿಹಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ್ದ ಅವರು ಕೂಡಲೇ ಪರಿಹಾರ ನೀಡಬೇಕೆಂದು ಸೂಚಿಸಿದ್ದರು. ಅದರಂತೆ, ಪೂರ್ವ ವಲಯದ ಆಯುಕ್ತ ಪಿ.ಎನ್. ರವೀಂದ್ರ ಅವರು ಪೋಷಕರಾದ ಸರವಣ ಮತ್ತು ಯಮುನಾ ಅವರಿಗೆ ಪರಿಹಾರದ ಚೆಕ್ ವಿತರಿಸಿದರು.