ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 80 ಲಕ್ಷ ದರೋಡೆ: ಕೇರಳದ 8 ಮಂದಿ ವಶಕ್ಕೆ

Last Updated 21 ಮಾರ್ಚ್ 2023, 22:17 IST
ಅಕ್ಷರ ಗಾತ್ರ

ಬೆಂಗಳೂರು: ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿ ₹ 80 ಲಕ್ಷ ದರೋಡೆ ಮಾಡಿದ್ದ ಆರೋಪದಡಿ ಕೇರಳದ 8 ಮಂದಿಯನ್ನು ಮಹದೇವಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

‘ಸ್ಥಳೀಯ ಹೋಲ್‌ಸೇಲ್ ವ್ಯಾಪಾರಿಯೊಬ್ಬರು ಅಂಗಡಿಗಳಿಂದ ಸಂಗ್ರಹಿಸಿದ್ದ ಹಣವನ್ನು ಕಾರಿನಲ್ಲಿಟ್ಟುಕೊಂಡು ಹೊರಟಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಮಾರಕಾಸ್ತ್ರಗಳನ್ನು ತೋರಿಸಿ ಕೊಲೆ ಬೆದರಿಕೆಯೊಡ್ಡಿ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ವ್ಯಾಪಾರಿ ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.‘ವ್ಯಾಪಾರಿ ಬಗ್ಗೆ ಗೊತ್ತಿರುವ ವ್ಯಕ್ತಿಗಳೇ ಕೃತ್ಯ ಎಸಗಿರುವ ಅನುಮಾನವಿತ್ತು. ಕೆಲ ಪುರಾವೆಗಳನ್ನು ಸಂಗ್ರಹಿಸಿ 8 ಮಂದಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ.’

‘ಆರೋಪಿಯೊಬ್ಬ ನಿಷೇಧಿತ ಪಿಎಫ್‌ಐ ಸದಸ್ಯನೆಂದು ಗೊತ್ತಾಗಿದೆ. ತನಿಖೆ ಮುಂದುವರಿದಿದ್ದು,
ಸದ್ಯಕ್ಕೆ ಯಾವುದೇ ಮಾಹಿತಿ ಬಹಿರಂಗಪಡಿಸಲಾಗದು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT