ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ರಮೇಶ್, ‘ರಾಜರಾಜೇಶ್ವರಿನಗರ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿ, ನೌಕರರಿಗಿಂತಲೂ ಮಧ್ಯವರ್ತಿಗಳ ಹಾವಳಿಯೇ ಹೆಚ್ಚಾಗಿದೆ. ಯಶವಂತಕುಮಾರ್, ವಿಜಯಕುಮಾರ್, ಮುತ್ತುರಾಜ್ ಎಂಬ ಮಧ್ಯವರ್ತಿಗಳು ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರ ಆಸನಗಳಲ್ಲಿ ಕುಳಿತು ತಮಗಿಷ್ಟ ಬಂದಂತೆ ದಾಖಲೆಗಳಲ್ಲಿ ಎಂಟ್ರಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.