ಬೆಂಗಳೂರು: ಇತ್ತೀಚೆಗೆ ನಡೆದ ರಾಷ್ಟ್ರೀಯ ಲೋಕ ಅದಾಲತ್–2019ರಲ್ಲಿ ಒಟ್ಟು 86,380 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯಾಯಾಲಯದಲ್ಲಿ ಬಾಕಿ ಇದ್ದ 78,829 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕಇತ್ಯರ್ಥಪಡಿಸಲಾಗಿದೆ. 6,417 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ಹೈಕೋರ್ಟ್ನಲ್ಲಿ ಬಾಕಿ ಇದ್ದ 1,134 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ರಾಜಿಯಾದ ಮೊತ್ತ ₹ 379 ಕೋಟಿ ಎಂದು ವಿವರಿಸಲಾಗಿದೆ.
‘ಇದೇ ಸೆಪ್ಟೆಂಬರ್ 14ರಂದು ನಡೆದಿದ್ದ ಲೋಕ ಅದಾಲತ್ನಲ್ಲಿ 65,864 ಪ್ರಕರಣಗಳು ಇತ್ಯರ್ಥವಾಗಿದ್ದವು. ಈ ಬಾರಿ ಎಲ್ಲರ ಸಹಕಾರದಿಂದ ಈ ಸಂಖ್ಯೆ 86 ಸಾವಿರ ದಾಟಿದೆ’ ಎಂದು ಬಸವರಾಜ ಅವರು ತಿಳಿಸಿದ್ದಾರೆ.