<p><strong>ಬೆಂಗಳೂರು</strong>: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಮಹಾಪೋಷಕ’ರಾಗಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನಿಯೋಜನೆಗೊಂಡಿದ್ದಾರೆ.</p>.<p>ಡಿಸೆಂಬರ್ 20, 21 ಹಾಗೂ 22ರಂದು ಸಮ್ಮೇಳನ ನಡೆಯಲಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹಾಗೂ ಪದಾಧಿಕಾರಿಗಳು, ಮಂಡ್ಯದ ಜಿಲ್ಲಾಧಿಕಾರಿ ಕುಮಾರ ಅವರನ್ನು ಒಳಗೊಂಡ ನಿಯೋಗವು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಸಮ್ಮೇಳನದ ‘ಮಹಾಪೋಷಕ’ರಾಗುವಂತೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ವಾಮೀಜಿ ಸಮ್ಮತಿ ಸೂಚಿಸಿದ್ದಾರೆ. </p>.<p>‘ಇದು ಕನ್ನಡಿಗರೆಲ್ಲರ ಸಮ್ಮೇಳನ. ನಮ್ಮದು ಕನ್ನಡ ಮಠವಾಗಿದ್ದು, ಭವ್ಯ ಇತಿಹಾಸ ಹೊಂದಿದೆ. ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಕಾಪಾಡಿಕೊಂಡು ಬಂದಿದೆ. ಇಲ್ಲಿ ನಡೆಯುವ ಕಾರ್ಯಕ್ರಮಗಳು ಕನ್ನಡದ ಅಸ್ಮಿತೆಯನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ. ಸಮ್ಮೇಳನಕ್ಕೆ ಬೆನ್ನೆಲುಬಾಗಿ ನಿಲ್ಲಲಾಗುವುದು’ ಎಂದು ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಮಂಡ್ಯದಲ್ಲಿ 30 ವರ್ಷಗಳ ನಂತರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಮಂಡ್ಯದ ಜನರು ದೇಶ-ವಿದೇಶಗಳಲ್ಲಿ ನೆಲೆಸಿದ್ದು, ಅವರು ಸಮ್ಮೇಳನದಲ್ಲಿ ಭಾಗಿಯಾಗುವ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. ಈ ಸಮ್ಮೇಳನದ ‘ಮಹಾಪೋಷಕ’ರಾಗಲು ಸ್ವಾಮೀಜಿ ಒಪ್ಪಿರುವುದರಿಂದ ಸಮ್ಮೇಳನವು ಐತಿಹಾಸಿಕವಾಗಿ ನಡೆಯುವ ವಿಶ್ವಾಸವಿದೆ’ ಎಂದು ಮಹೇಶ ಜೋಶಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಮಹಾಪೋಷಕ’ರಾಗಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನಿಯೋಜನೆಗೊಂಡಿದ್ದಾರೆ.</p>.<p>ಡಿಸೆಂಬರ್ 20, 21 ಹಾಗೂ 22ರಂದು ಸಮ್ಮೇಳನ ನಡೆಯಲಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹಾಗೂ ಪದಾಧಿಕಾರಿಗಳು, ಮಂಡ್ಯದ ಜಿಲ್ಲಾಧಿಕಾರಿ ಕುಮಾರ ಅವರನ್ನು ಒಳಗೊಂಡ ನಿಯೋಗವು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಸಮ್ಮೇಳನದ ‘ಮಹಾಪೋಷಕ’ರಾಗುವಂತೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ವಾಮೀಜಿ ಸಮ್ಮತಿ ಸೂಚಿಸಿದ್ದಾರೆ. </p>.<p>‘ಇದು ಕನ್ನಡಿಗರೆಲ್ಲರ ಸಮ್ಮೇಳನ. ನಮ್ಮದು ಕನ್ನಡ ಮಠವಾಗಿದ್ದು, ಭವ್ಯ ಇತಿಹಾಸ ಹೊಂದಿದೆ. ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಕಾಪಾಡಿಕೊಂಡು ಬಂದಿದೆ. ಇಲ್ಲಿ ನಡೆಯುವ ಕಾರ್ಯಕ್ರಮಗಳು ಕನ್ನಡದ ಅಸ್ಮಿತೆಯನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ. ಸಮ್ಮೇಳನಕ್ಕೆ ಬೆನ್ನೆಲುಬಾಗಿ ನಿಲ್ಲಲಾಗುವುದು’ ಎಂದು ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಮಂಡ್ಯದಲ್ಲಿ 30 ವರ್ಷಗಳ ನಂತರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಮಂಡ್ಯದ ಜನರು ದೇಶ-ವಿದೇಶಗಳಲ್ಲಿ ನೆಲೆಸಿದ್ದು, ಅವರು ಸಮ್ಮೇಳನದಲ್ಲಿ ಭಾಗಿಯಾಗುವ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. ಈ ಸಮ್ಮೇಳನದ ‘ಮಹಾಪೋಷಕ’ರಾಗಲು ಸ್ವಾಮೀಜಿ ಒಪ್ಪಿರುವುದರಿಂದ ಸಮ್ಮೇಳನವು ಐತಿಹಾಸಿಕವಾಗಿ ನಡೆಯುವ ವಿಶ್ವಾಸವಿದೆ’ ಎಂದು ಮಹೇಶ ಜೋಶಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>