ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮಲ್ಲೇಶ್ವರದ ನಿವಾಸಿ ಪಾರ್ವತಿಬಾಯಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಅಧಿಕ ರಕ್ತದೊತ್ತಡ ಸೇರಿದಂತೆ ವಯೋಸಹಜ ಅನಾರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಆ.1ರಂದು ಸೋಂಕಿತರಾಗಿರುವುದು ದೃಢಪಟ್ಟ ಕಾರಣ ಮಲ್ಲೇಶ್ವರದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಅವರಿಗೆ ಮೊದಲ ದಿನಎಚ್ಡಿಯು (ಹೈ ಡಿಪೆಂಡೆನ್ಸಿ ಯುನಿಟ್) ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಅವರನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರ ಮಾಡಲಾಯಿತು. ಚಿಕಿತ್ಸೆಗೆ ಸ್ಪಂದಿಸಿದ ಅವರು, ಆ.11ರಂದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.