ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರಿನಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದು ಕೈದಿ ಆತ್ಮಹತ್ಯೆ

Last Updated 26 ಮೇ 2018, 10:30 IST
ಅಕ್ಷರ ಗಾತ್ರ

ತಮಕೂರು: ಇಲ್ಲಿನ ಕೋರ್ಟ್ ಕಟ್ಟಡದ 3ನೇ ಅಂತಸ್ತಿನಿಂದ ಬಿದ್ದು ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಕೈದಿಯನ್ನು ಗುಬ್ಬಿ ತಾಲ್ಲೂಕಿನ, ಚೇಳೂರು ಹೋಬಳಿಯ ನಾಗಲಾಪುರ ಗ್ರಾಮದ ಚಂದ್ರು (29) ಎಂದು ಗುರುತಿಸಲಾಗಿದೆ. 

2017ರಲ್ಲಿ 6 ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಈತನ ವಿರುದ್ಧ ಚೇಳೂರು ಠಾಣೆಯಲ್ಲಿ ದಾಖಲಾಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ತಿಳಿಸಿದ್ದಾರೆ.

ಶನಿವಾರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಇತ್ತು. ವಿಚಾರಣೆ ದಿನಾಂಕ ಮುಂದೂಡಿದ ಬಳಿಕ ಕೋರ್ಟ್ ಕೊಠಡಿ ಆಚೆ ಬರುತ್ತಿದ್ದಂತೆಯೇ ಕೆಳಕ್ಕೆ ಜಿಗಿದಿದ್ದ. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT