‘ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಪೌರಕಾರ್ಮಿಕರಿಗೆ ಅನಾನುಕೂಲವಾಗುವಂತೆ ಮಾಡಿರುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕು. ಕಿಲೋಮೀಟರ್ ಲೆಕ್ಕದಲ್ಲಿ ಪೌರಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸುವ ಅವೈಜ್ಞಾನಿಕ ಪದ್ಧತಿಯನ್ನು ಕೈಬಿಡಬೇಕು. ನಿವೃತ್ತ ನಂತರವೂ ಆರೋಗ್ಯ ಗುರುತಿನ ಚೀಟಿ ಮುಂದುವರಿಸಬೇಕು. ನೌಕರರು ಮೃತಪಟ್ಟರೆ ಶವಸಂಸ್ಕಾರಕ್ಕೆ ₹20,000 ಮೊತ್ತವನ್ನು ಪಾಲಿಕೆ ವತಿಯಿಂದ ನೀಡಬೇಕು. ಕಾಲಕಾಲಕ್ಕೆ ಪೌರ ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಲ್ಪಿಸಬೇಕು. ಕೆಲಸಕ್ಕೆ ಅಗತ್ಯವಿರುವ ಪರಿಕರಗಳನ್ನು ಒದಗಿಸಬೇಕು’ ಎಂದರು.