<p><strong>ಬೆಂಗಳೂರು</strong>: ಹತ್ತು ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಖಾಸಗಿ ಶಾಲೆಯೊಂದರ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>‘ಆರೋಪಿ ಪುಷ್ಪರಾಜ್, ಸ್ವಂತ ಶಾಲೆ ನಡೆಸುತ್ತಿದ್ದಾನೆ. ಆತನೇ ಶಾಲೆಯ ಪ್ರಾಂಶುಪಾಲನಾಗಿದ್ದಾನೆ. ಸಂತ್ರಸ್ತ ಬಾಲಕಿಯ ಪೋಷಕರು ನೀಡಿರುವ ದೂರು ಆಧರಿಸಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p><p>‘ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಬಾಲಕಿ ಹಾಗೂ ಆರೋಪಿಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ಬರಬೇಕಿದೆ’ ಎಂದು ತಿಳಿಸಿದರು.</p><p><strong>ಮನೆಗೆ ಕರೆದೊಯ್ದು ಕೃತ್ಯ:</strong> ‘ಶಾಲೆ ಆವರಣದಲ್ಲಿಯೇ ಆರೋಪಿ ಪುಷ್ಪರಾಜ್ ಮನೆ ಇದೆ. ಅದೇ ಮನೆಗೆ ವಿದ್ಯಾರ್ಥಿನಿಯನ್ನು ಕರೆದೊಯ್ದು ಆರೋಪಿ ಕೃತ್ಯ ಎಸಗಿದ್ದಾನೆ’ ಎಂದು ಪೊಲೀಸರು ಹೇಳಿದರು.</p><p>‘ವಿದ್ಯಾರ್ಥಿನಿ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ. ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಎಂದಿನಂತೆ ಶಾಲೆಗೆ ಬಂದಿದ್ದಳು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಶಾಲೆಯ ತರಗತಿ ಕೊಠಡಿಯಲ್ಲಿ ಬಾಲಕಿ ಒಂಟಿಯಾಗಿ ಕುಳಿತಿದ್ದಳು. ಇತರೆ ಮಕ್ಕಳು ಆಟವಾಡಲು ಮೈದಾನಕ್ಕೆ ಹೋಗಿದ್ದರು.’</p>.<p>‘ಬಾಲಕಿಯನ್ನು ಗಮನಿಸಿದ್ದ ಆರೋಪಿ, ಆಕೆಯ ಬಳಿ ಹೋಗಿದ್ದ. ‘ನನ್ನ ಜೊತೆ ಬಾ. ನಿನಗೆ ಕೇಕ್ ಕೊಡುತ್ತೇನೆ’ ಎಂದು ಬಾಲಕಿಯನ್ನು ಮನೆಗೆ ಕರೆದೊಯ್ದಿದ್ದ. ಇದೇ ಸಂದರ್ಭದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನೆಂಬುದು ಸದ್ಯದ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.</p><p>‘ಕೃತ್ಯದ ಬಳಿಕ ಆರೋಪಿ, ಬಾಲಕಿಗೆ ಕೇಕ್ ಕೊಟ್ಟು ಮನೆಯಿಂದ ಹೊರಗೆ ಕಳುಹಿಸಿದ್ದ. ಸಂಜೆ 4.30 ಸುಮಾರಿಗೆ ಎಂದಿನಂತೆ ಮನೆಗೆ ಹೋಗಿದ್ದ ಬಾಲಕಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಜೊತೆಗೆ, ಒಳ ಉಡುಪಿನಲ್ಲಿ ರಕ್ತಸ್ರಾವವಾಗಿತ್ತು. ಅದನ್ನು ಗಮನಿಸಿದ್ದ ತಾಯಿ, ಆಸ್ಪತ್ರೆಗೆ ಕರೆದೊಯ್ದಿದ್ದರು.’</p><p>‘ತಪಾಸಣೆ ನಡೆಸಿದ ವೈದ್ಯರು, ಅತ್ಯಾಚಾರವಾಗಿರುವುದಾಗಿ ತಿಳಿಸಿದ್ದರು. ನಂತರವೇ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದಾರೆ. ಬಾಲಕಿ ಸಹ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿದ್ದಾಳೆ’ ಎಂದು ಪೊಲೀಸರು ಹೇಳಿದರು.</p>.<div><blockquote>ಪೋಷಕರು ದೂರು ನೀಡುತ್ತಿದ್ದಂತೆ ಪುರಾವೆ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಹಿನ್ನೆಲೆ ಹಾಗೂ ಈತನ ಕೃತ್ಯದ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ.</blockquote><span class="attribution">–ಎಸ್. ಗಿರೀಶ್, ವೈಟ್ಫೀಲ್ಡ್ ವಿಭಾಗದ ಡಿಸಿಪಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹತ್ತು ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಖಾಸಗಿ ಶಾಲೆಯೊಂದರ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>‘ಆರೋಪಿ ಪುಷ್ಪರಾಜ್, ಸ್ವಂತ ಶಾಲೆ ನಡೆಸುತ್ತಿದ್ದಾನೆ. ಆತನೇ ಶಾಲೆಯ ಪ್ರಾಂಶುಪಾಲನಾಗಿದ್ದಾನೆ. ಸಂತ್ರಸ್ತ ಬಾಲಕಿಯ ಪೋಷಕರು ನೀಡಿರುವ ದೂರು ಆಧರಿಸಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p><p>‘ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಬಾಲಕಿ ಹಾಗೂ ಆರೋಪಿಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ಬರಬೇಕಿದೆ’ ಎಂದು ತಿಳಿಸಿದರು.</p><p><strong>ಮನೆಗೆ ಕರೆದೊಯ್ದು ಕೃತ್ಯ:</strong> ‘ಶಾಲೆ ಆವರಣದಲ್ಲಿಯೇ ಆರೋಪಿ ಪುಷ್ಪರಾಜ್ ಮನೆ ಇದೆ. ಅದೇ ಮನೆಗೆ ವಿದ್ಯಾರ್ಥಿನಿಯನ್ನು ಕರೆದೊಯ್ದು ಆರೋಪಿ ಕೃತ್ಯ ಎಸಗಿದ್ದಾನೆ’ ಎಂದು ಪೊಲೀಸರು ಹೇಳಿದರು.</p><p>‘ವಿದ್ಯಾರ್ಥಿನಿ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ. ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಎಂದಿನಂತೆ ಶಾಲೆಗೆ ಬಂದಿದ್ದಳು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಶಾಲೆಯ ತರಗತಿ ಕೊಠಡಿಯಲ್ಲಿ ಬಾಲಕಿ ಒಂಟಿಯಾಗಿ ಕುಳಿತಿದ್ದಳು. ಇತರೆ ಮಕ್ಕಳು ಆಟವಾಡಲು ಮೈದಾನಕ್ಕೆ ಹೋಗಿದ್ದರು.’</p>.<p>‘ಬಾಲಕಿಯನ್ನು ಗಮನಿಸಿದ್ದ ಆರೋಪಿ, ಆಕೆಯ ಬಳಿ ಹೋಗಿದ್ದ. ‘ನನ್ನ ಜೊತೆ ಬಾ. ನಿನಗೆ ಕೇಕ್ ಕೊಡುತ್ತೇನೆ’ ಎಂದು ಬಾಲಕಿಯನ್ನು ಮನೆಗೆ ಕರೆದೊಯ್ದಿದ್ದ. ಇದೇ ಸಂದರ್ಭದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನೆಂಬುದು ಸದ್ಯದ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.</p><p>‘ಕೃತ್ಯದ ಬಳಿಕ ಆರೋಪಿ, ಬಾಲಕಿಗೆ ಕೇಕ್ ಕೊಟ್ಟು ಮನೆಯಿಂದ ಹೊರಗೆ ಕಳುಹಿಸಿದ್ದ. ಸಂಜೆ 4.30 ಸುಮಾರಿಗೆ ಎಂದಿನಂತೆ ಮನೆಗೆ ಹೋಗಿದ್ದ ಬಾಲಕಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಜೊತೆಗೆ, ಒಳ ಉಡುಪಿನಲ್ಲಿ ರಕ್ತಸ್ರಾವವಾಗಿತ್ತು. ಅದನ್ನು ಗಮನಿಸಿದ್ದ ತಾಯಿ, ಆಸ್ಪತ್ರೆಗೆ ಕರೆದೊಯ್ದಿದ್ದರು.’</p><p>‘ತಪಾಸಣೆ ನಡೆಸಿದ ವೈದ್ಯರು, ಅತ್ಯಾಚಾರವಾಗಿರುವುದಾಗಿ ತಿಳಿಸಿದ್ದರು. ನಂತರವೇ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದಾರೆ. ಬಾಲಕಿ ಸಹ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿದ್ದಾಳೆ’ ಎಂದು ಪೊಲೀಸರು ಹೇಳಿದರು.</p>.<div><blockquote>ಪೋಷಕರು ದೂರು ನೀಡುತ್ತಿದ್ದಂತೆ ಪುರಾವೆ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಹಿನ್ನೆಲೆ ಹಾಗೂ ಈತನ ಕೃತ್ಯದ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ.</blockquote><span class="attribution">–ಎಸ್. ಗಿರೀಶ್, ವೈಟ್ಫೀಲ್ಡ್ ವಿಭಾಗದ ಡಿಸಿಪಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>