ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲ : ರೈಲು ಢಿಕ್ಕಿ ಹೊಡೆದು ಬಿಹಾರ ಮೂಲದ ಕಾರ್ಮಿಕ ಸಾವು

Published 22 ಮೇ 2023, 4:53 IST
Last Updated 22 ಮೇ 2023, 4:53 IST
ಅಕ್ಷರ ಗಾತ್ರ

ಉಳ್ಳಾಲ: ತೊಕ್ಕೊಟ್ಟು ಒಳಪೇಟೆ ಬಳಿ  ಹಳಿ ದಾಟುತ್ತಿದ್ದ ಕಾರ್ಮಿಕರೊಬ್ಬರು ರೈಲು ಡಿಕ್ಕಿ ಹೊಡೆದು ಶನಿವಾರ ರಾತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಬಿಹಾರದ ಶ್ರವಣದಾಸ್ (40) ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಶ್ರವಣದಾಸ್‌ ಅವರು ತೊಕ್ಕೊಟ್ಟುವಿನ ಕಲ್ಕಟ್ಟದಲ್ಲಿ ಬಾಡಿಗೆ ಕೊಠಡಿಯಲ್ಲಿ ಒಂಟಿಯಾಗಿ ವಾಸವಿದ್ದರು. ಶನಿವಾರ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಬಳಿಕ ಸಾಂಬಾರ್ ತರಲೆಂದು ಹೋಟೆಲ್‌ಗೆ ತೆರಳಿದ್ದರು. ಅಲ್ಲಿಂದ ಮರಳುವಾಗ ರೈಲು ಡಿಕ್ಕಿ ಹೊಡೆದಿತ್ತು. 

ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಿಸೆಯಲ್ಲಿ ದೊರೆತ ಆಧಾರ್ ಕಾರ್ಡ್ ನೆರವಿನಿಂದ ಮೃತರ ಗುರುತು ಪತ್ತೆ ಹಚ್ಚಿದ್ದಾರೆ.

‘ಮೃತರ ಪತ್ನಿ ಹಾಗೂ ಮಕ್ಕಳು ಬಿಹಾರದಲ್ಲಿದ್ದಾರೆ’ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT