<p><strong>ಬೆಂಗಳೂರು</strong>: ಮಲ್ಲೇಶ್ವರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಅಭಿಷೇಕ್ (22) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಾಜಿನಗರದ ಅಭಿಷೇಕ್, ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕೆಲಸ ಮಾಡುತ್ತಿದ್ದ. ಅ. 23ರಂದು ಕೃತ್ಯ ಎಸಗಿದ್ದ. ಮನೆ ಮಾಲೀಕರು ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ₹ 1.03 ಲಕ್ಷ ಮೌಲ್ಯದ 23 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮನೆಯಲ್ಲಿ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಿದ್ದ ಮಾಲೀಕರು, ಆರೋಪಿ ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ಕ್ಯಾಮೆರಾ ಖರೀದಿಸಿದ್ದರು. ಸಹೋದ್ಯೋಗಿ ಜೊತೆ ಮನೆಗೆ ಬಂದಿದ್ದ ಆರೋಪಿ, ಮನೆಯ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸುವ ಕೆಲಸ ಆರಂಭಿಸಿದ್ದ. ಮಾಲೀಕರು ಪ್ರಾರ್ಥನೆಗೆಂದು ಮಸೀದಿಗೆ ಹೋಗಿದ್ದರು.’</p>.<p>‘ಮಾಲೀಕರು ಇಲ್ಲದ ಸಮಯದಲ್ಲಿ ಮನೆಯಲ್ಲಿ ಹುಡುಕಾಡಿದ್ದ ಅಭಿಷೇಕ್, ಡ್ರಾಯರ್ನಲ್ಲಿಟ್ಟಿದ್ದ ಚಿನ್ನದ ಬಳೆ ಹಾಗೂ ಉಂಗುರಗಳನ್ನು ಕದ್ದಿಟ್ಟು ಕೊಂಡಿದ್ದ. ಈ ಸಂಗತಿ ಸಹೋದ್ಯೋಗಿಗೂ ಗೊತ್ತಾಗಿರಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಲ್ಲೇಶ್ವರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಅಭಿಷೇಕ್ (22) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಾಜಿನಗರದ ಅಭಿಷೇಕ್, ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕೆಲಸ ಮಾಡುತ್ತಿದ್ದ. ಅ. 23ರಂದು ಕೃತ್ಯ ಎಸಗಿದ್ದ. ಮನೆ ಮಾಲೀಕರು ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ₹ 1.03 ಲಕ್ಷ ಮೌಲ್ಯದ 23 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮನೆಯಲ್ಲಿ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಿದ್ದ ಮಾಲೀಕರು, ಆರೋಪಿ ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ಕ್ಯಾಮೆರಾ ಖರೀದಿಸಿದ್ದರು. ಸಹೋದ್ಯೋಗಿ ಜೊತೆ ಮನೆಗೆ ಬಂದಿದ್ದ ಆರೋಪಿ, ಮನೆಯ ಕೊಠಡಿಯಲ್ಲಿ ಕ್ಯಾಮೆರಾ ಅಳವಡಿಸುವ ಕೆಲಸ ಆರಂಭಿಸಿದ್ದ. ಮಾಲೀಕರು ಪ್ರಾರ್ಥನೆಗೆಂದು ಮಸೀದಿಗೆ ಹೋಗಿದ್ದರು.’</p>.<p>‘ಮಾಲೀಕರು ಇಲ್ಲದ ಸಮಯದಲ್ಲಿ ಮನೆಯಲ್ಲಿ ಹುಡುಕಾಡಿದ್ದ ಅಭಿಷೇಕ್, ಡ್ರಾಯರ್ನಲ್ಲಿಟ್ಟಿದ್ದ ಚಿನ್ನದ ಬಳೆ ಹಾಗೂ ಉಂಗುರಗಳನ್ನು ಕದ್ದಿಟ್ಟು ಕೊಂಡಿದ್ದ. ಈ ಸಂಗತಿ ಸಹೋದ್ಯೋಗಿಗೂ ಗೊತ್ತಾಗಿರಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>