ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಕಾಲು ತುಳಿದ ವಿಚಾರಕ್ಕೆ ವ್ಯಕ್ತಿಯ ಕೊಲೆ: ಆರೋಪಿ ಬಂಧನ

Published : 30 ಸೆಪ್ಟೆಂಬರ್ 2024, 15:31 IST
Last Updated : 30 ಸೆಪ್ಟೆಂಬರ್ 2024, 15:31 IST
ಫಾಲೋ ಮಾಡಿ
Comments
ಕೀರ್ತಿ 
ಕೀರ್ತಿ 
ಹರೀಶ್‌ 
ಹರೀಶ್‌ 
ಕಲ್ಲು ಎತ್ತಿಹಾಕಿ ಕೊಲೆ ಪ್ರಕರಣ: ಆರೋಪಿ ಬಂಧನ
ಬೆಂಗಳೂರು: ಊಟಕ್ಕೆ ಕುಳಿತುಕೊಳ್ಳುವ ಸ್ಥಳದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕಾರ್ಮಿಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಬಂಧಿತ ಆರೋಪಿ. ಸೆ.24ರಂದು ಶ್ರೀನಿವಾಸನಗರದ 11ನೇ ಕ್ರಾಸ್‌ನ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಜಿತ್​​​ (30) ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಬಳಿಕ ಆರೋಪಿ ಪರಾರಿ ಆಗಿದ್ದರು. ಅವರನ್ನು ಪತ್ತೆಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು. ‘ಅಜಿತ್​​​ ಹಾಗೂ ಆರೋಪಿ ಹರೀಶ್​​​ ಇಬ್ಬರೂ ಸ್ನೇಹಿತರು. ಕೃತ್ಯ ನಡೆದಿದ್ದ ಕಟ್ಟಡದಲ್ಲಿಯೇ ಗಾರೆ ಕೆಲಸ ಮಾಡಿಕೊಂಡಿದ್ದರು. ಸೆ.24ರಂದು ಕಟ್ಟಡದ ಮೊದಲ ಮಹಡಿಯಲ್ಲಿದ್ದರು. ಆಗ ಅಜಿತ್‌ನ ಬಳಿ ಬಂದಿದ್ದ ಆರೋಪಿ ‘ಅದು ನಾನು ಕುಳಿತುಕೊಂಡು ಊಟ ಮಾಡುವ ಸ್ಥಳ. ಅಲ್ಲಿಂದ ಎದ್ದೇಳು’ ಎಂದು ಮನವಿ ಮಾಡಿದ್ದರು. ಆ ಸ್ಥಳದಿಂದ ಎದ್ದಿದ್ದ ಅಜಿತ್ ಅವರು ಕಟ್ಟಡದ ಮೂರನೇ ಮಹಡಿಗೆ ತೆರಳಿ ಊಟಕ್ಕೆ ಕುಳಿತಿದ್ದರು. ಅಲ್ಲಿಗೂ ಹೋಗಿದ್ದ ಹರೀಶ್ ಅಲ್ಲಿಯೂ ಗಲಾಟೆ ನಡೆಸಿದ್ದರು. ಆ ಸ್ಥಳದಲ್ಲಿ ‘ನಾನು ಕೂರಬೇಕು’ ಎಂದಿದ್ದರು. ಇಬ್ಬರ ಮಧ್ಯೆ ಗಲಾಟೆ ಆಗಿತ್ತು. ಆಗ ಅಜಿತ್‌ ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು’ ಎಂದು ಪೊಲೀಸರು ತಿಳಿಸಿದರು. ‘ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಹರೀಶ್‌ಗೆ ಅಪರಾಧ ಹಿನ್ನೆಲೆಯಿದೆ. ಈ ಹಿಂದೆ ಕೊರಟಗೆರೆಯಲ್ಲಿ ನಡೆದಿದ್ದ ಗಲಾಟೆಯಲ್ಲೂ ಭಾಗಿ ಆಗಿದ್ದರು. ಅಲ್ಲದೇ ಕೊಲೆ ಪ್ರಕರಣವೊಂದರಲ್ಲೂ ಬಂಧನಕ್ಕೆ ಒಳಗಾಗಿ ಜಾಮೀನ ಮೇಲೆ ಬಿಡುಗಡೆ ಆಗಿದ್ದರು’ ಎಂದು ಪೊಲೀಸರು ಹೇಳಿದರು. ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT