<p><strong>ಬೆಂಗಳೂರು</strong>: ಶಿವಾಜಿನಗರದ ರಸೆಲ್ ಮಾರುಕಟ್ಟೆಗೆ ಹೊಸ ರೂಪ ನೀಡಲು ಪುನರ್ ಅಭಿವೃದ್ಧಿಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಅಂತಿಮ ಅಂತದಲ್ಲಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<p>ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಮತ್ತು ನಾಗರಿಕ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ರಸೆಲ್ ಮಾರುಕಟ್ಟೆ ಪಾರಂಪರಿಕ ಕಟ್ಟಡವಾಗಿದ್ದು, ಅದಕ್ಕೆ ಆಧುನಿಕ ಸ್ಪರ್ಶ ನೀಡಿ, ಜನಸ್ನೇಹಿ ಮಾರುಕಟ್ಟೆಯಾಗಿ ರೂಪಿಸಲು ಸೂಚಿಸಿದರು.</p>.<p>‘ಪಾರ್ಕಿಂಗ್ ವ್ಯವಸ್ಥೆ, ಒಳಚರಂಡಿ, ನೀರು, ವಿದ್ಯುತ್, ಅಗ್ನಿ ಸುರಕ್ಷತೆ, ಶೌಚಾಲಯ ಸೌಲಭ್ಯಗಳು, ತ್ಯಾಜ್ಯ ವಿಂಗಡಣೆ ಹಾಗೂ ಕಾಂಪೋಸ್ಟಿಂಗ್ ವ್ಯವಸ್ಥೆಯ ಜೊತೆಗೆ ಸೌರಶಕ್ತಿ, ಮಳೆನೀರು ಸಂಗ್ರಹಕ್ಕೆ ಅನುಗುಣವಾಗಿ ವಿನ್ಯಾಸ ಮಾಡಲಾಗುತ್ತದೆ’ ಎಂದರು.</p>.<p>ಶಾಸಕ ರಿಜ್ವಾನ್ ಹರ್ಷದ್ ಮಾತನಾಡಿ, ‘ರಸೆಲ್ ಮಾರುಕಟ್ಟೆಯು ಅತ್ಯಂತ ಪುರಾತನ ಕಟ್ಟಡವಾಗಿದ್ದು, ಅದಕ್ಕೆ ಯಾವುದೇ ರೀತಿಯ ಧಕ್ಕೆ ಬಾರದಂತೆ ನಿರ್ಮಾಣ ಮಾಡಬೇಕು. ಸ್ಥಳೀಯವಾಗಿ ಯಾವುದೇ ಸಮಸ್ಯೆಗಳಾಗಂತೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಿವಾಜಿನಗರದ ರಸೆಲ್ ಮಾರುಕಟ್ಟೆಗೆ ಹೊಸ ರೂಪ ನೀಡಲು ಪುನರ್ ಅಭಿವೃದ್ಧಿಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಅಂತಿಮ ಅಂತದಲ್ಲಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.</p>.<p>ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಮತ್ತು ನಾಗರಿಕ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ರಸೆಲ್ ಮಾರುಕಟ್ಟೆ ಪಾರಂಪರಿಕ ಕಟ್ಟಡವಾಗಿದ್ದು, ಅದಕ್ಕೆ ಆಧುನಿಕ ಸ್ಪರ್ಶ ನೀಡಿ, ಜನಸ್ನೇಹಿ ಮಾರುಕಟ್ಟೆಯಾಗಿ ರೂಪಿಸಲು ಸೂಚಿಸಿದರು.</p>.<p>‘ಪಾರ್ಕಿಂಗ್ ವ್ಯವಸ್ಥೆ, ಒಳಚರಂಡಿ, ನೀರು, ವಿದ್ಯುತ್, ಅಗ್ನಿ ಸುರಕ್ಷತೆ, ಶೌಚಾಲಯ ಸೌಲಭ್ಯಗಳು, ತ್ಯಾಜ್ಯ ವಿಂಗಡಣೆ ಹಾಗೂ ಕಾಂಪೋಸ್ಟಿಂಗ್ ವ್ಯವಸ್ಥೆಯ ಜೊತೆಗೆ ಸೌರಶಕ್ತಿ, ಮಳೆನೀರು ಸಂಗ್ರಹಕ್ಕೆ ಅನುಗುಣವಾಗಿ ವಿನ್ಯಾಸ ಮಾಡಲಾಗುತ್ತದೆ’ ಎಂದರು.</p>.<p>ಶಾಸಕ ರಿಜ್ವಾನ್ ಹರ್ಷದ್ ಮಾತನಾಡಿ, ‘ರಸೆಲ್ ಮಾರುಕಟ್ಟೆಯು ಅತ್ಯಂತ ಪುರಾತನ ಕಟ್ಟಡವಾಗಿದ್ದು, ಅದಕ್ಕೆ ಯಾವುದೇ ರೀತಿಯ ಧಕ್ಕೆ ಬಾರದಂತೆ ನಿರ್ಮಾಣ ಮಾಡಬೇಕು. ಸ್ಥಳೀಯವಾಗಿ ಯಾವುದೇ ಸಮಸ್ಯೆಗಳಾಗಂತೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>