‘ಹೆಸರಘಟ್ಟ ಕೆರೆಯಲ್ಲಿ ನೀರಿರುವುದರಿಂದ ಅಕ್ಕಪಕ್ಕದ ಗ್ರಾಮಗಳಿಗೆ ಬಹಳಷ್ಟು ಅನುಕೂಲವಾಗಿದೆ. ಹಲವಾರು ಪ್ರಾಣಿ ಮತ್ತು ಪಕ್ಷಿಗಳು ಕೆರೆಯ ನೀರಿನ ಮೇಲೆ ಅವಲಂಬಿತವಾಗಿವೆ. ಹೀಗಾಗಿ, ಇಲ್ಲಿನ ನೀರನ್ನು ನಗರದ ಇತರೆ ಪ್ರದೇಶಗಳಿಗೆ ಸರಬರಾಜು ಮಾಡುವುದು ಬೇಡ. ಈ ಕೆರೆಗೆ ನೀರು ಬರುವಂತಹ ಪ್ರದೇಶಗಳಲ್ಲಿ ಮಾಲಿನ್ಯವಿದ್ದು, ಅದನ್ನು ತಡೆಯಬೇಕು. ಹೂಳು ತುಂಬಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ಹೆಸರಘಟ್ಟ ಕೆರೆಯನ್ನು ಅಭಿವೃದ್ದಿಪಡಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ ಮನವಿ ಮಾಡಿದರು.