ಬೆಂಗಳೂರು: ಭಾರತ ಕಮ್ಯೂನಿಸ್ಟ್ ಪಕ್ಷದ ಬೆಂಗಳೂರು ಕಚೇರಿ ಮೇಲೆ ದಾಳಿಗೆ ಬಿಜೆಪಿ ಸರ್ಕಾರವೇ ಹೊಣೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಆರೋಪಿಸಿದರು.
ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಮೋದಿ ಸರ್ಕಾರದಿಂದ ಸಂವಿಧಾನದ ಅಘೋಷಿತ ದಮನ ನಡೆಯುತ್ತಿದೆ. ಇದರ ವಿರುದ್ಧ ಜನವರಿ 1ರಿಂದ 7 ರವರೆಗೆ ರಾಷ್ಡ್ರವ್ಯಾಪಿ ಆಂದೋಲನ ನಡೆಯಲಿದೆ. ಜ.8ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಯಲಿದೆ ಎಂದರು.