ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸ್ಥೆಯ ಕಾರ್ಯಾಚರಣೆ ಮುಖ್ಯಸ್ಥ ಡಾ. ಬಿಷ್ಣು ಪಾಣಿಗ್ರಹಿ, ‘ದೇಶದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಗಳು ಹೆಚ್ಚು ಪರಿಣಾಮಕಾರಿಯಾಗಿವೆ ಎಂಬುದು ಈ ಅಧ್ಯಯನದ ಮೂಲಕ ತಿಳಿದು ಬಂದಿದೆ. ಹೀಗಾಗಿ, ಲಸಿಕೆ ಉತ್ಪಾದನೆಯನ್ನು ಹೆಚ್ಚು ಮಾಡಿ, ಆದಷ್ಟು ಬೇಗ ಎಲ್ಲರಿಗೂ ನೀಡಬೇಕು. ಆಗ ಸೋಂಕಿನಿಂದಾಗುವ ಅಪಾಯದಿಂದ ತಪ್ಪಿಸಿಕೊಳ್ಳಬಹುದು’ ಎಂದು ತಿಳಿಸಿದ್ದಾರೆ.