<p><strong>ಬೆಂಗಳೂರು:</strong> ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಅಕ್ಷಯ್ ಅವರು ಕೋಮಾ ಸ್ಥಿತಿಗೆ ತಲುಪಿದ್ದು, ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.</p>.<p>ಬನಶಂಕರಿಯ ಬ್ರಹ್ಮಚೈತನ್ಯ ಮಂದಿರದ ಬಳಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ವೇಳೆ ಭಾನುವಾರ ಮಧ್ಯಾಹ್ನ ಮರದ ಕೊಂಬೆ ಬಿದ್ದು, ಶ್ರೀನಗರ ನಿವಾಸಿ ಅಕ್ಷಯ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳೀಯರು ತಕ್ಷಣ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.<br><br>ನರರೋಗ ತಜ್ಞ ಡಾ.ಶ್ರೀದತ್ ಮಾತನಾಡಿ, ‘ ಅಕ್ಷಯ್ ಅವರ ತಲೆ ಬುರುಡೆಗೆ ತೀವ್ರ ಪೆಟ್ಟು ಬಿದ್ದಿದ್ದು, ಭಾನುವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ಚಿಂತಾಜನಕವಾಗಿದೆ. ಅಂಗಾಂಗಗಳು ಕೆಲಸ ಮಾಡಲು ಔಷಧ ನೀಡಲಾಗುತ್ತಿದೆ. ಮಿದುಳಿಗೆ ದೊಡ್ಡ ಪೆಟ್ಟಾಗಿದೆ. ಈಗಲೇ ಏನೂ ಹೇಳಲು ಆಗುವುದಿಲ್ಲ, ಕೋಮಾ ಸ್ಥಿತಿ ತಲುಪಿದ್ದಾರೆ’ ಎಂದು ತಿಳಿಸಿದರು.</p>.<p>ಖಾಸಗಿ ಸಂಸ್ಥೆ ಉದ್ಯೋಗಿಯಾಗಿದ್ದ ಅಕ್ಷಯ್, ಭಾನುವಾರ ತಂದೆಯ ಜನ್ಮದಿನದ ಪ್ರಯುಕ್ತ ಕುರಿ ಮಾಂಸ ತೆಗೆದುಕೊಂಡು ಬರುವುದಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಜೋರು ಗಾಳಿಗೆ ಮರದ ಕೊಂಬೆ ಮುರಿದು ಅವರ ತಲೆ ಮೇಲೆ ಬಿದ್ದಿತ್ತು. ತಲೆ ಬುರುಡೆಯಲ್ಲಿ ಸುಮಾರು 10ಕ್ಕೂ ಅಧಿಕ ಕಡೆ ಗಾಯವಾಗಿತ್ತು. </p>.<p>‘ತಂದೆ ಮೂತ್ರಪಿಂಡ ಸಮಸ್ಯೆಯಿಂದ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಷಯ್ ದುಡಿದು ಮನೆ ನಡೆಸುವುದರ ಜೊತೆಗೆ ತಂದೆಗೆ ಚಿಕಿತ್ಸೆ ಕೊಡಿಸುತ್ತಿದ್ದರು. ಅವರ ಆರೋಗ್ಯದ ಬಗ್ಗೆ ವೈದ್ಯರು ಈಗಲೇ ಏನೂ ಹೇಳಲು ಆಗುವುದಿಲ್ಲ ಎಂದಿದ್ದಾರೆ. ದಿಕ್ಕು ತೋಚುತ್ತಿಲ್ಲ’ ಎಂದು ಸಹೋದರ ಬೆನಕ ಹೇಳಿದರು.</p>.<p>‘ರಭಸದ ಗಾಳಿ ಬೀಸಿದ ಪರಿಣಾಮ ಒಣಗಿದ ಕೊಂಬೆ ಬಿದ್ದು ಈ ಅನಾಹುತವಾಗಿದೆ. ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿಯೇ ಭರಿಸಲಿದೆ ಎಂದು ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿಎಲ್ಜಿ ಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಅಕ್ಷಯ್ ಅವರು ಕೋಮಾ ಸ್ಥಿತಿಗೆ ತಲುಪಿದ್ದು, ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.</p>.<p>ಬನಶಂಕರಿಯ ಬ್ರಹ್ಮಚೈತನ್ಯ ಮಂದಿರದ ಬಳಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ವೇಳೆ ಭಾನುವಾರ ಮಧ್ಯಾಹ್ನ ಮರದ ಕೊಂಬೆ ಬಿದ್ದು, ಶ್ರೀನಗರ ನಿವಾಸಿ ಅಕ್ಷಯ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಸ್ಥಳೀಯರು ತಕ್ಷಣ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.<br><br>ನರರೋಗ ತಜ್ಞ ಡಾ.ಶ್ರೀದತ್ ಮಾತನಾಡಿ, ‘ ಅಕ್ಷಯ್ ಅವರ ತಲೆ ಬುರುಡೆಗೆ ತೀವ್ರ ಪೆಟ್ಟು ಬಿದ್ದಿದ್ದು, ಭಾನುವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ಚಿಂತಾಜನಕವಾಗಿದೆ. ಅಂಗಾಂಗಗಳು ಕೆಲಸ ಮಾಡಲು ಔಷಧ ನೀಡಲಾಗುತ್ತಿದೆ. ಮಿದುಳಿಗೆ ದೊಡ್ಡ ಪೆಟ್ಟಾಗಿದೆ. ಈಗಲೇ ಏನೂ ಹೇಳಲು ಆಗುವುದಿಲ್ಲ, ಕೋಮಾ ಸ್ಥಿತಿ ತಲುಪಿದ್ದಾರೆ’ ಎಂದು ತಿಳಿಸಿದರು.</p>.<p>ಖಾಸಗಿ ಸಂಸ್ಥೆ ಉದ್ಯೋಗಿಯಾಗಿದ್ದ ಅಕ್ಷಯ್, ಭಾನುವಾರ ತಂದೆಯ ಜನ್ಮದಿನದ ಪ್ರಯುಕ್ತ ಕುರಿ ಮಾಂಸ ತೆಗೆದುಕೊಂಡು ಬರುವುದಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಜೋರು ಗಾಳಿಗೆ ಮರದ ಕೊಂಬೆ ಮುರಿದು ಅವರ ತಲೆ ಮೇಲೆ ಬಿದ್ದಿತ್ತು. ತಲೆ ಬುರುಡೆಯಲ್ಲಿ ಸುಮಾರು 10ಕ್ಕೂ ಅಧಿಕ ಕಡೆ ಗಾಯವಾಗಿತ್ತು. </p>.<p>‘ತಂದೆ ಮೂತ್ರಪಿಂಡ ಸಮಸ್ಯೆಯಿಂದ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಷಯ್ ದುಡಿದು ಮನೆ ನಡೆಸುವುದರ ಜೊತೆಗೆ ತಂದೆಗೆ ಚಿಕಿತ್ಸೆ ಕೊಡಿಸುತ್ತಿದ್ದರು. ಅವರ ಆರೋಗ್ಯದ ಬಗ್ಗೆ ವೈದ್ಯರು ಈಗಲೇ ಏನೂ ಹೇಳಲು ಆಗುವುದಿಲ್ಲ ಎಂದಿದ್ದಾರೆ. ದಿಕ್ಕು ತೋಚುತ್ತಿಲ್ಲ’ ಎಂದು ಸಹೋದರ ಬೆನಕ ಹೇಳಿದರು.</p>.<p>‘ರಭಸದ ಗಾಳಿ ಬೀಸಿದ ಪರಿಣಾಮ ಒಣಗಿದ ಕೊಂಬೆ ಬಿದ್ದು ಈ ಅನಾಹುತವಾಗಿದೆ. ಚಿಕಿತ್ಸಾ ವೆಚ್ಚವನ್ನು ಬಿಬಿಎಂಪಿಯೇ ಭರಿಸಲಿದೆ ಎಂದು ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿಎಲ್ಜಿ ಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>