<p><strong>ಬೆಂಗಳೂರು</strong>: ರಾಜರಾಜೇಶ್ವರಿನಗರದಲ್ಲಿ ನಾಲ್ಕು ದಶಕಗಳಿಂದ ನೆರಳು ನೀಡುತ್ತಿದ್ದ ಮಳೆ ಮರವನ್ನು ಕೆಡವಿ ಹಾಕುವ ಮೂಲಕ ಬಿಬಿಎಂಪಿ ಪರಿಸರ ನಾಶ ಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಈ ಮರ ಯಾರಿಗೂ ತೊಂದರೆ ನೀಡುವ ಪ್ರದೇಶದಲ್ಲಿ ಇರಲಿಲ್ಲ, ಆರೋಗ್ಯಕರವಾಗಿತ್ತು. ಆದರೂ ಮರ ಕಡಿಯುವಂತೆ ಬಿಬಿಎಂಪಿ ಅರಣ್ಯ ಕೋಶದ ಅಧಿಕಾರಿಗಳು ಆದೇಶ ಮಾಡಿದ್ದು, ಶನಿವಾರ ಕಡಿದು ಹಾಕಲಾಗಿದೆ.</p>.<p>74 ವರ್ಷದ ಶಂಕರ ನಾರಾಯಣ್ ನೇತೃತ್ವದಲ್ಲಿ ಸ್ಥಳೀಯರು ಮರ ಉಳಿಸಲು ಪ್ರಯತ್ನಿಸಿದರೂ ಗುತ್ತಿಗೆದಾರರು ಸ್ಪಂದಿಸಲಿಲ್ಲ ಎಂದು ದೂರಿದ್ದಾರೆ.</p>.<p>ಅಧಿಕಾರಿಗಳು ಮರ ಪರೀಕ್ಷಿಸಿ ವರದಿ ನೀಡಬೇಕು. ಅಪಾಯಕಾರಿ ಎಂಬುದು ವರದಿಯಲ್ಲಿದ್ದರಷ್ಟೇ ಕಡಿಯಬಹುದು. ಆದರೆ, ಇಂಥ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಈ ಬಗ್ಗೆ ಬಿಬಿಎಂಪಿ ಅರಣ್ಯ ಕೋಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಮನಕ್ಕೆ ತರಲಾಯಿತು. ಅವರು ಕಿರಿಯ ಅಧಿಕಾರಿಯನ್ನು ಕಳುಹಿಸಿ ಮಾಹಿತಿ ಸಂಗ್ರಹಿಸಿದರು. ಗುತ್ತಿಗೆದಾರರೊಬ್ಬರು ತಮ್ಮ ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಒತ್ತಾಯಪೂರ್ವಕವಾಗಿ ಮರ ಕಡಿಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಬಿಬಿಎಂಪಿ ಅರಣ್ಯ ಕೋಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಪರಿಸರ ಪ್ರೇಮಿಗಳು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆಗಾಗಿ ‘ಪ್ರಜಾವಾಣಿ’ಯು ಬಿಬಿಎಂಪಿ ಅರಣ್ಯ ಕೋಶದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜರಾಜೇಶ್ವರಿನಗರದಲ್ಲಿ ನಾಲ್ಕು ದಶಕಗಳಿಂದ ನೆರಳು ನೀಡುತ್ತಿದ್ದ ಮಳೆ ಮರವನ್ನು ಕೆಡವಿ ಹಾಕುವ ಮೂಲಕ ಬಿಬಿಎಂಪಿ ಪರಿಸರ ನಾಶ ಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಈ ಮರ ಯಾರಿಗೂ ತೊಂದರೆ ನೀಡುವ ಪ್ರದೇಶದಲ್ಲಿ ಇರಲಿಲ್ಲ, ಆರೋಗ್ಯಕರವಾಗಿತ್ತು. ಆದರೂ ಮರ ಕಡಿಯುವಂತೆ ಬಿಬಿಎಂಪಿ ಅರಣ್ಯ ಕೋಶದ ಅಧಿಕಾರಿಗಳು ಆದೇಶ ಮಾಡಿದ್ದು, ಶನಿವಾರ ಕಡಿದು ಹಾಕಲಾಗಿದೆ.</p>.<p>74 ವರ್ಷದ ಶಂಕರ ನಾರಾಯಣ್ ನೇತೃತ್ವದಲ್ಲಿ ಸ್ಥಳೀಯರು ಮರ ಉಳಿಸಲು ಪ್ರಯತ್ನಿಸಿದರೂ ಗುತ್ತಿಗೆದಾರರು ಸ್ಪಂದಿಸಲಿಲ್ಲ ಎಂದು ದೂರಿದ್ದಾರೆ.</p>.<p>ಅಧಿಕಾರಿಗಳು ಮರ ಪರೀಕ್ಷಿಸಿ ವರದಿ ನೀಡಬೇಕು. ಅಪಾಯಕಾರಿ ಎಂಬುದು ವರದಿಯಲ್ಲಿದ್ದರಷ್ಟೇ ಕಡಿಯಬಹುದು. ಆದರೆ, ಇಂಥ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಈ ಬಗ್ಗೆ ಬಿಬಿಎಂಪಿ ಅರಣ್ಯ ಕೋಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಮನಕ್ಕೆ ತರಲಾಯಿತು. ಅವರು ಕಿರಿಯ ಅಧಿಕಾರಿಯನ್ನು ಕಳುಹಿಸಿ ಮಾಹಿತಿ ಸಂಗ್ರಹಿಸಿದರು. ಗುತ್ತಿಗೆದಾರರೊಬ್ಬರು ತಮ್ಮ ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಒತ್ತಾಯಪೂರ್ವಕವಾಗಿ ಮರ ಕಡಿಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಬಿಬಿಎಂಪಿ ಅರಣ್ಯ ಕೋಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಪರಿಸರ ಪ್ರೇಮಿಗಳು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯೆಗಾಗಿ ‘ಪ್ರಜಾವಾಣಿ’ಯು ಬಿಬಿಎಂಪಿ ಅರಣ್ಯ ಕೋಶದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>