<p><strong>ಬೆಂಗಳೂರು</strong>: ಪಶ್ಚಿಮ ವಿಭಾಗದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವ್ಹೀಲಿ ನಡೆಸುತ್ತಿದ್ದ ಯುವಕ ಪಿ. ಅಕ್ಷಯ್ ಎಂಬಾತನನ್ನು ಮಾಗಡಿ ರಸ್ತೆ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಠಾಣಾ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಯುವಕ ಅಪಾಯಕಾರಿಯಾಗಿ ವ್ಹೀಲಿ ನಡೆಸುತ್ತಿರುವುದು ಕಂಡುಬಂದಿತ್ತು. ಆಗ ಬೈಕ್ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.</p>.<p>‘ಬಾಪೂಜಿ ನಗರದ ನಿವಾಸಿ ಅಕ್ಷಯ್, ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಬಂದು ವ್ಹೀಲಿ ನಡೆಸುತ್ತಿದ್ದ’ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>ಬಿಎನ್ಎಸ್ ಕಾಯ್ದೆ ಸೆಕ್ಷನ್ 129, 189 ಹಾಗೂ ಮೋಟಾರು ವಾಹನಗಳ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.</p>.<p>ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಾಗಡಿ ಮುಖ್ಯರಸ್ತೆಯಲ್ಲಿ ಯುವಕರು ಬೈಕ್ನಲ್ಲಿ ವ್ಹೀಲಿ ನಡೆಸುತ್ತಿರುವ ಕುರಿತು ದೂರುಗಳು ಬಂದಿವೆ. ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಅನಿತಾ ಹದ್ದಣ್ನವರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಶ್ಚಿಮ ವಿಭಾಗದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವ್ಹೀಲಿ ನಡೆಸುತ್ತಿದ್ದ ಯುವಕ ಪಿ. ಅಕ್ಷಯ್ ಎಂಬಾತನನ್ನು ಮಾಗಡಿ ರಸ್ತೆ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಠಾಣಾ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಯುವಕ ಅಪಾಯಕಾರಿಯಾಗಿ ವ್ಹೀಲಿ ನಡೆಸುತ್ತಿರುವುದು ಕಂಡುಬಂದಿತ್ತು. ಆಗ ಬೈಕ್ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು ಎಂದು ಸಂಚಾರ ಪೊಲೀಸರು ಹೇಳಿದರು.</p>.<p>‘ಬಾಪೂಜಿ ನಗರದ ನಿವಾಸಿ ಅಕ್ಷಯ್, ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಬಂದು ವ್ಹೀಲಿ ನಡೆಸುತ್ತಿದ್ದ’ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>ಬಿಎನ್ಎಸ್ ಕಾಯ್ದೆ ಸೆಕ್ಷನ್ 129, 189 ಹಾಗೂ ಮೋಟಾರು ವಾಹನಗಳ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.</p>.<p>ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಾಗಡಿ ಮುಖ್ಯರಸ್ತೆಯಲ್ಲಿ ಯುವಕರು ಬೈಕ್ನಲ್ಲಿ ವ್ಹೀಲಿ ನಡೆಸುತ್ತಿರುವ ಕುರಿತು ದೂರುಗಳು ಬಂದಿವೆ. ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಅನಿತಾ ಹದ್ದಣ್ನವರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>