ಮೃತದೇಹವು ಬೆಟ್ಟದ ಕಂದಕದಲ್ಲಿ ಬಿದ್ದಿದ್ದು, ಅದನ್ನು ತೆಗೆಯಲು ಪೊಲೀಸರು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಮೃತದೇಹವನ್ನು ತೆಗೆಯಲು ಪ್ರಯತ್ನಿಸಿದರು. ಆದರೆ ಅದೂ ಸಹ ಸಾಧ್ಯವಾಗಲಿಲ್ಲ. ಆನಂತರ ಪೊಲೀಸರು ಬೆಂಗಳೂರಿನಿಂದ ವಿಶೇಷ ಪರಿಣಿತರ ತಂಡವನ್ನು ಕರೆಸಿ ಮೃತದೇಹವನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿದ್ದರು. ಸಂಜೆಯಾದರೂ ಮೃತದೇಹವನ್ನು ಹೊರತೆಗೆಯಲು ಸಾಧ್ಯವಾಗಿರಲಿಲ್ಲ.