<p><strong>ಬೆಂಗಳೂರು</strong>: ಸಾಕು ನಾಯಿ ಬೊಗಳಿದ್ದ ವಿಚಾರಕ್ಕೆ ಗಲಾಟೆ ಮಾಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಶಂಕರ್ ಎಂಬುವವರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬಿಹಾರದ ಶಂಕರ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ಟೈಲ್ಸ್ ಜೋಡಿಸುವ ಕೆಲಸ ಮಾಡುತ್ತಿದ್ದ. ಯುವತಿ ನೀಡಿದ್ದ ದೂರು ಆಧರಿಸಿ ಶಂಕರ್ನನ್ನು ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಪೋಷಕರ ಜೊತೆ ಯುವತಿ ವಾಸವಿದ್ದಾರೆ. ಅವರ ಮನೆ ಸಮೀಪದಲ್ಲೇ ಆರೋಪಿ ಶಂಕರ್ ನೆಲೆಸಿದ್ದಾನೆ. ಮಾರ್ಚ್ 7ರಂದು ರಾತ್ರಿ ಶಂಕರ್ ಸ್ನೇಹಿತರ ಜೊತೆ ತನ್ನ ಮನೆಗೆ ಬಂದಿದ್ದ. ಇದೇ ಸಂದರ್ಭದಲ್ಲಿ ಯುವತಿ ಮನೆಯ ಸಾಕು ನಾಯಿ ಬೊಗಳಿತ್ತು.’</p>.<p>‘ಸಾಕು ನಾಯಿಗೆ ಹೊಡೆಯಲು ಹೋಗಿದ್ದ ಶಂಕರ್, ಅದನ್ನು ಪ್ರಶ್ನಿಸಿದ್ದ ಯುವತಿಯ ತಂದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದ. ತಂದೆಯ ರಕ್ಷಣೆಗೆ ಹೋಗಿದ್ದ ಯುವತಿಯನ್ನು ಎಳೆದಾಡಿ ದೌರ್ಜನ್ಯ ಎಸಗಿದ್ದನೆಂದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾಕು ನಾಯಿ ಬೊಗಳಿದ್ದ ವಿಚಾರಕ್ಕೆ ಗಲಾಟೆ ಮಾಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಶಂಕರ್ ಎಂಬುವವರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಬಿಹಾರದ ಶಂಕರ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ಟೈಲ್ಸ್ ಜೋಡಿಸುವ ಕೆಲಸ ಮಾಡುತ್ತಿದ್ದ. ಯುವತಿ ನೀಡಿದ್ದ ದೂರು ಆಧರಿಸಿ ಶಂಕರ್ನನ್ನು ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಪೋಷಕರ ಜೊತೆ ಯುವತಿ ವಾಸವಿದ್ದಾರೆ. ಅವರ ಮನೆ ಸಮೀಪದಲ್ಲೇ ಆರೋಪಿ ಶಂಕರ್ ನೆಲೆಸಿದ್ದಾನೆ. ಮಾರ್ಚ್ 7ರಂದು ರಾತ್ರಿ ಶಂಕರ್ ಸ್ನೇಹಿತರ ಜೊತೆ ತನ್ನ ಮನೆಗೆ ಬಂದಿದ್ದ. ಇದೇ ಸಂದರ್ಭದಲ್ಲಿ ಯುವತಿ ಮನೆಯ ಸಾಕು ನಾಯಿ ಬೊಗಳಿತ್ತು.’</p>.<p>‘ಸಾಕು ನಾಯಿಗೆ ಹೊಡೆಯಲು ಹೋಗಿದ್ದ ಶಂಕರ್, ಅದನ್ನು ಪ್ರಶ್ನಿಸಿದ್ದ ಯುವತಿಯ ತಂದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದ. ತಂದೆಯ ರಕ್ಷಣೆಗೆ ಹೋಗಿದ್ದ ಯುವತಿಯನ್ನು ಎಳೆದಾಡಿ ದೌರ್ಜನ್ಯ ಎಸಗಿದ್ದನೆಂದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>