ಬೆಂಗಳೂರು: ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ವತಿಯಿಂದ ‘ಯೋಧ ನಮನ, ಗೀತ–ನೃತ್ಯ ಸಮರ್ಪಣ ಹಾಗೂ ಆದರ್ಶರತ್ನ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮವನ್ನು ಬಸವನಗುಡಿಯ ಗಾಯನ ಸಮಾಜದಲ್ಲಿ ಅ. 14ರಂದು ಸಂಜೆ 5.30ಕ್ಕೆ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಯೋಧರಿಗೆ ಸಮರ್ಪಿಸಲಾಗಿದೆ. ಜತೆಗೆ ಪ್ರವಾಹದಿಂದ ಹಾನಿಗೆ ಒಳಗಾದ ಕೊಡಗಿನ ಸರ್ಕಾರಿ ಶಾಲೆಯೊಂದರ ಪುನರ್ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಅಕಾಡೆಮಿಯ ಕಲಾವಿದರು ಇತ್ತೀಚೆಗೆ ನಡೆಸಿಕೊಟ್ಟ ಕಾರ್ಯಕ್ರಮಗಳಿಂದ ಪಡೆದ ಸಂಭಾವನೆಯನ್ನು ಶಾಲೆಗಾಗಿ ನೀಡುತ್ತಿದ್ದಾರೆ. ಭಾಗವಹಿಸುವ ಸಭಿಕರು ಇದಕ್ಕೆ ಕೈಜೋಡಿಸಲು ಅವಕಾಶವಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ, ಅಣ್ಣಾ ವಿ.ವಿ ಕುಲಪತಿ ಪ್ರೊ.ಎಂ.ಕೆ.ಸೂರಪ್ಪ, ಪಿ.ಇ.ಎಸ್. ವಿ.ವಿ ಕುಲಾಧಿಪತಿ ಡಾ.ಎಂ.ಆರ್.ದೊರೆಸ್ವಾಮಿ ಅವರಿಗೆಇದೇ ವೇಳೆ ‘ಆದರ್ಶರತ್ನ ಪ್ರಶಸ್ತಿ–2018’ ಪ್ರದಾನ ಮಾಡಲಾಗುತ್ತದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.