ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಅಣ್ಣಾಮಲೈ ಅವರು ಮೇಕೆದಾಟು ವಿರುದ್ಧ ಮಾಡಿದ್ದ ಟ್ವೀಟ್ಗೆ ಕರ್ನಾಟಕದವರಾದಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪ್ರತಿಕ್ರಿಯಿಸುವ ಮೂಲಕ ಬೆಂಬಲಿಸಿರುವುದು ಖಂಡನೀಯ. ರಾಜ್ಯದ ಜನರ ಕ್ಷಮೆ ಯಾಚಿಸುವಂತೆ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚಿಸಬೇಕು’ ಎಂದು ಆಗ್ರಹಿಸಿದರು.