ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ‘ರಸ್ತೆ ಗುಂಡಿಗಳಿಗೆ ಸಂಬಂಧಿಸಿ ಹೈಕೋರ್ಟ್ ಪದೇ ಪದೇ ಬಿಬಿಎಂಪಿ ಹಾಗೂ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ಕಳೆದ ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಜನ ರಸ್ತೆ ಗುಂಡಿಗಳಿಂದಾಗಿ ಮೃತರಾಗಿದ್ದಾರೆ. ಸಾಕಷ್ಟು ಅಪಘಾತಗಳು ಸಂಭವಿಸಿವೆ. ಆದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ’ ಎಂದು ದೂರಿದರು.